ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುವೆಂಪು ಅವಮಾನಿಸಿದವರನ್ನು ಒದ್ದು ಒಳಗೆ ಹಾಕಿ- ಎಚ್‌ಡಿಕೆ

Last Updated 24 ಮೇ 2022, 18:57 IST
ಅಕ್ಷರ ಗಾತ್ರ

ಬೆಂಗಳೂರು: 'ನಾಡಗೀತೆ ಮತ್ತು ಕುವೆಂಪು ಅವರನ್ನು ಅಪಮಾನಿಸಿದ ವ್ಯಕ್ತಿಯನ್ನು ಮೊದಲು ಒದ್ದು ಒಳಗೆ ಹಾಕಬೇಕು' ಎಂದು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹೆಸರು ಹೇಳದೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ನಾಡಗೀತೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಸಮಿತಿ ಅಧ್ಯಕ್ಷನನ್ನಾಗಿ ಮಾಡಿರುವುದೇ ತಪ್ಪು. ಕುವೆಂಪು ಮತ್ತು ನಾಡಗೀತೆಗೆ ಅಪಮಾನ ಮಾಡಿದರೆ ಸುಮ್ಮನಿರುವುದಿಲ್ಲ' ಎಂದು ಎಚ್ಚರಿಕೆ ನೀಡಿದರು.

'ಯಾವುದೋ ಒಂದು ವಿಷಯಕ್ಕೆ ಟ್ವೀಟ್ ಮಾಡುವವರನ್ನು ಜೈಲಿಗೆ ಹಾಕುತ್ತೀರಿ. ಆದರೆ, ಮಹಾನ್ ಕವಿಯ ಬಗ್ಗೆ ಅವಹೇಳನ ಮಾಡಿದವನನ್ನು ಸುಮ್ಮನೆ ಬಿಟ್ಟಿದ್ದೀರಿ. ಕುವೆಂಪು ಅನೇಕರ ಪ್ರೋತ್ಸಾಹದಿಂದ ಕವಿ ಆದರಂತೆ. ಈ ರೀತಿ ಹೇಳಿದವನ ಹಿನ್ನೆಲೆ ಏನು?’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT