ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ಜವಳಿ ನೀತಿ ಪ್ರಕಟ

Last Updated 18 ಆಗಸ್ಟ್ 2022, 22:23 IST
ಅಕ್ಷರ ಗಾತ್ರ

ಬೆಂಗಳೂರು: ‌ಕಲ್ಯಾಣ ಕರ್ನಾಟಕದಲ್ಲಿ ಸ್ಥಾಪನೆಯಾಗುವ ಸಿದ್ಧ ಉಡುಪು ತಯಾರಿಕಾ ಘಟಕಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಹೊಸ ಜವಳಿ ನೀತಿಯಲ್ಲಿ ಈ ಅಂಶವನ್ನು ಪ್ರಕಟಿಸಿದೆ.

ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳಜಿಲ್ಲೆಯಲ್ಲಿನ ಸಿದ್ಧ ಉಡುಪು ತಯಾರಿಕಾ ಘಟಕಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನೀಡುವ ವೇತನ ಪ್ರೋತ್ಸಾಹ ಧನವನ್ನು ₹1500ರಿಂದ ₹3 ಸಾವಿರಕ್ಕೆ ಹೆಚ್ಚಿಸಲಾಗಿದೆ. ರಾಜ್ಯದ ಇತರೆಡೆಯ ಘಟಕಗಳಲ್ಲಿನ ಕಾರ್ಮಿಕರ ವೇತನ ಪ್ರೋತ್ಸಾಹಧನವನ್ನು ₹1 ಸಾವಿರದಿಂದ ₹2 ಸಾವಿರಕ್ಕೆ ಹೆಚ್ಚಳ ಮಾಡಿದೆ.

ಈ ನೀತಿ ಬಗ್ಗೆ ಉದ್ಯಮಿಗಳೊಂದಿಗೆ ಗುರುವಾರ ಸಂವಾದ ನಡೆಸಿದ ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ‘ಜವಳಿ ಉದ್ಯಮಕ್ಕೆ ಪ್ರೋತ್ಸಾಹ ನೀಡಲು ಹೊಸ ನೀತಿ ಪ್ರಕಟಿಸಲಾಗಿದೆ. ಬದಲಾವಣೆ ಬಯಸಿ ಸಲಹೆಗಳನ್ನು ನೀಡಿದರೆ ಪರಿಶೀಲನೆ ನಡೆಸಲು ಸರ್ಕಾರ ಸಿದ್ಧವಿದೆ’ ಎಂದರು.

₹1,518 ಕೋಟಿ ಹೂಡಿಕೆಗೆ ಒಪ್ಪಂದ
ಹೊಸ ನೀತಿ ಜಾರಿಗೆ ಬಂದ ಕೂಡಲೇ ಜವಳಿ ಉದ್ಯಮದಲ್ಲಿ ₹‌1,518 ಕೋಟಿ ಬಂಡವಾಳ ಹೂಡಲು ಸಿದ್ಧ ಉಡುಪು ತಯಾರಿಕಾ ಕಂಪನಿಗಳು ಮುಂದೆ ಬಂದಿದ್ದು, ಈ ಪೈಕಿ ನಾಲ್ಕು ಕಂಪನಿಗಳು ಗುರುವಾರ ಒಡಂಬಡಿಕೆ ಮಾಡಿಕೊಂಡವು.

₹20 ಕೋಟಿ ಬಂಡವಾಳ ಹೂಡಿ 2 ಸಾವಿರ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ಗೋಕುಲ್ ದಾಸ್ ಎಕ್ಸ್‌ಪೋರ್ಟ್ ಪ್ರೈವೇಟ್ ಲಿಮಿಟೆಡ್ ಘೋಷಿಸಿತು. ₹ 346 ಕೋಟಿ ಹೂಡಿಕೆ ಮಾಡಲಿರುವ ಮಂಜುಶ್ರೀ ಸ್ಪಿನ್‌ಟೆಕ್, 325 ಉದ್ಯೋಗ ಸೃಷ್ಟಿ ಮಾಡುವುದಾಗಿ ಪ್ರಕಟಿಸಿತು.

₹27 ಕೋಟಿ ಹೂಡಲು ಒಪ್ಪಂದ ಮಾಡಿಕೊಂಡ ಯಾರ್‌ಕಾರ್ ಫ್ಯಾಬ್ರಿಕ್, 100 ಜನರಿಗೆ ಉದ್ಯೋಗ ನೀಡುವುದಾಗಿ ತಿಳಿಸಿತು. ಟೆಕ್ಸ್‌ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ₹45 ಕೋಟಿ ಬಂಡವಾಳ ಹೂಡಿ 2 ಸಾವಿರ ಜನರಿಗೆ ಉದ್ಯೋಗ ಕಲ್ಪಿಸುವುದಾಗಿ ಪ್ರಕಟಿಸಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT