ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಅಧೀನ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆ ಆದೇಶವನ್ನು ಬದಿಗಿರಿಸಿದ ನ್ಯಾಯಮೂರ್ತಿ ಬಿ. ವೀರಪ್ಪ ಮತ್ತು ನ್ಯಾಯಮೂರ್ತಿ ಕೆ.ನಾಗರಾಜನ್ ಅವರಿದ್ದ ವಿಭಾಗೀಯ ಪೀಠ, ‘ಸಾಕ್ಷಿಗಳ ಪಾಟಿ ಸವಾಲಿಗೆ ಅವಕಾಶ ನೀಡಬೇಕು ಎಂಬ ಆರೋಪಿಯ ಮನವಿಯನ್ನು ಪುರಸ್ಕರಿಸಬೇಕು’ ಎಂದು ತಿಳಿಸಿದೆ.