ಸೋಮವಾರ ನಡೆದ ರಾಜ್ಯಮಟ್ಟದ ಬ್ಯಾಂಕರುಗಳ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಕೋವಿಡ್ ಸಂಕಷ್ಟ ಇದ್ದರೂ ಕೃಷಿ ಸಾಲ ಮತ್ತು ಮುದ್ರಾ ಸಾಲ ಯೋಜನೆಗಳ ಅನುಷ್ಠಾನದಲ್ಲಿ ಕರ್ನಾಟಕದ ಬ್ಯಾಂಕ್ಗಳು ದೇಶದಲ್ಲೇ ಅಗ್ರ ಸ್ಥಾನದಲ್ಲಿವೆ. ಈ ಎರಡೂ ಯೋಜನೆಗಳಡಿ ₹ 13,497 ಕೋಟಿ ಸಾಲ ವಿತರಣೆ ಮಾಡಲಾಗಿದೆ. ಪ್ರಧಾನ ಮಂತ್ರಿ ಉದ್ಯೋಗ ಭದ್ರತೆ ಯೋಜನೆಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ, ಪ್ರಧಾನ ಮಂತ್ರಿ ಆವಾಸ್ ಮತ್ತು ಪಿಎಂಎಸ್ ನಿಧಿ ಯೋಜನೆಗಳ ಅನುಷ್ಠಾನದಲ್ಲೂ ರಾಜ್ಯ ಮುಂಚೂಣಿಯಲ್ಲಿದೆ’ ಎಂದು ತಿಳಿಸಿದರು.