<p><strong>ಹುಬ್ಬಳ್ಳಿ:</strong> ಲೂಟಿ ಮಾಡುವ ಖಾತೆ ಸಿಗಲಿಲ್ಲ ಎಂದು ಮುಖ್ಯಮಂತ್ರಿ ಬದಲಾವಣೆಗೆ ಸಿ.ಪಿ. ಯೋಗೇಶ್ವರ ಮುಂದಾಗಿದ್ದಾರೆ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. ಇದು ಬಿಜೆಪಿ ಆಡಳಿತ ವೈಖರಿ ತೋರಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಸಂಪೂರ್ಣ ವಿಫಲರಾಗಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ಸಮರ್ಥರಿಲ್ಲ ಎಂದು ಅವರನ್ನೇ ಮುಂದುವರೆಸಲಾಗುತ್ತಿದೆ ಎಂದು ಟೀಕಿಸಿದರು.</p>.<p>ರಾಜ್ಯದಲ್ಲಿ ಜನರು ಕೋವಿಡ್ ನಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಸಂಕಷ್ಟಕ್ಕೆ ಸ್ಪಂದಿಸಬೇಕಿದ್ದ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.</p>.<p>ಅತ್ಯಾಚಾರ ಪ್ರಕರಣದಲ್ಲಿ ರಮೇಶ ಜಾರಕಿಹೊಳಿಯನ್ನು ತಕ್ಷಣ ಬಂಧಿಸಬೇಕು. ಅವರ ರಕ್ಷಣೆಗೆ ನಿಂತಿರುವ ಸಚಿವ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು. ಹೇಳಿಕೆ ಕೊಟ್ಟ ಮೇಲೂ ಆರೋಪಿಯನ್ನು ಯಾಕೆ ಬಂಧಿಸಿಲ್ಲ. ದೇಶದಲ್ಲಿ ಇಂತಹ ಬೆಳವಣಿಗೆ ಎಲ್ಲಿಯಾದರೂ ನೋಡಲು ಸಾಧ್ಯಾನಾ ಎಂದು ಪ್ರಶ್ನಿಸಿದರು.</p>.<p>ಅತ್ಯಾಚಾರ ಆರೋಪಿ ಗೃಹ ಸಚಿವರನ್ನು ನೇರವಾಗಿ ಭೇಟಿಯಾಗುತ್ತಾರೆ. ತನಿಖಾಧಿಕಾರಿಯನ್ನು ರಜೆ ಮೇಲೆ ಕಳಿಸಿದ್ದರ ಅರ್ಥ ಏನು ಎಂದು ಕೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಲೂಟಿ ಮಾಡುವ ಖಾತೆ ಸಿಗಲಿಲ್ಲ ಎಂದು ಮುಖ್ಯಮಂತ್ರಿ ಬದಲಾವಣೆಗೆ ಸಿ.ಪಿ. ಯೋಗೇಶ್ವರ ಮುಂದಾಗಿದ್ದಾರೆ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. ಇದು ಬಿಜೆಪಿ ಆಡಳಿತ ವೈಖರಿ ತೋರಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಸಂಪೂರ್ಣ ವಿಫಲರಾಗಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ಸಮರ್ಥರಿಲ್ಲ ಎಂದು ಅವರನ್ನೇ ಮುಂದುವರೆಸಲಾಗುತ್ತಿದೆ ಎಂದು ಟೀಕಿಸಿದರು.</p>.<p>ರಾಜ್ಯದಲ್ಲಿ ಜನರು ಕೋವಿಡ್ ನಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಸಂಕಷ್ಟಕ್ಕೆ ಸ್ಪಂದಿಸಬೇಕಿದ್ದ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.</p>.<p>ಅತ್ಯಾಚಾರ ಪ್ರಕರಣದಲ್ಲಿ ರಮೇಶ ಜಾರಕಿಹೊಳಿಯನ್ನು ತಕ್ಷಣ ಬಂಧಿಸಬೇಕು. ಅವರ ರಕ್ಷಣೆಗೆ ನಿಂತಿರುವ ಸಚಿವ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು. ಹೇಳಿಕೆ ಕೊಟ್ಟ ಮೇಲೂ ಆರೋಪಿಯನ್ನು ಯಾಕೆ ಬಂಧಿಸಿಲ್ಲ. ದೇಶದಲ್ಲಿ ಇಂತಹ ಬೆಳವಣಿಗೆ ಎಲ್ಲಿಯಾದರೂ ನೋಡಲು ಸಾಧ್ಯಾನಾ ಎಂದು ಪ್ರಶ್ನಿಸಿದರು.</p>.<p>ಅತ್ಯಾಚಾರ ಆರೋಪಿ ಗೃಹ ಸಚಿವರನ್ನು ನೇರವಾಗಿ ಭೇಟಿಯಾಗುತ್ತಾರೆ. ತನಿಖಾಧಿಕಾರಿಯನ್ನು ರಜೆ ಮೇಲೆ ಕಳಿಸಿದ್ದರ ಅರ್ಥ ಏನು ಎಂದು ಕೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>