<p><strong>ಬೆಂಗಳೂರು:</strong> ಈಆರ್ಥಿಕ ವರ್ಷದಲ್ಲಿ ಜುಲೈ ಅಂತ್ಯದವರೆಗೆ ಕೇಂದ್ರ ಪುರಸ್ಕೃತ ಯೋಜನೆಗಳಿಗಾಗಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ₹ 7,343 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ತಿಳಿಸಿದ್ದಾರೆ.</p>.<p>‘ಪ್ರಜಾವಾಣಿ’ಯ ಗುರುವಾರದ ಸಂಚಿಕೆಯಲ್ಲಿ ಪ್ರಕಟವಾಗಿದ್ದ <strong><a href="https://www.prajavani.net/karnataka-news/the-central-government-has-not-released-the-fund-for-central-sponsored-schemes-863123.html" target="_blank">‘ಕೈಕೊಟ್ಟ ಕೇಂದ್ರ: ಯೋಜನೆ ಸ್ಥಗಿತ’</a></strong> ವರದಿಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಈ ಆರ್ಥಿಕ ವರ್ಷದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರದ ಪಾಲಿನಿಂದ ₹ 17,643 ಕೋಟಿ ನಿಗದಿಪಡಿಸಲಾಗಿದೆ. ಈ ಪೈಕಿ ₹ 7,343 ಕೋಟಿ ಬಿಡುಗಡೆಯಾಗಿದ್ದು, ₹ 6,065 ಕೋಟಿ ರಾಜ್ಯದ ಪಾಲಿನ ಹೊಂದಾಣಿಕೆ ಅನುದಾನವನ್ನೂ ಒದಗಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>ಜುಲೈ ಅಂತ್ಯದ ವೇಳೆಗೆ 22 ಇಲಾಖೆಗಳಲ್ಲಿ ₹ 13,408 ಕೋಟಿ ಅನುದಾನ ಲಭ್ಯವಿತ್ತು. ₹ 8,815 ಕೋಟಿಯನ್ನು ವೆಚ್ಚ ಮಾಡಿದ್ದು, ಶೇಕಡ 46ರಷ್ಟು ಪ್ರಗತಿ ಸಾಧಿಸಲಾಗಿದೆ. 2020–21ನೇ ಆರ್ಥಿಕ ವರ್ಷದಲ್ಲಿ ಇದೇ ಅವಧಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದ ಪಾಲಿನಿಂದ ₹ 6,110 ಕೋಟಿ ಬಿಡುಗಡೆಯಾಗಿತ್ತು. ಈ ಬಾರಿ ಶೇ 6ರಷ್ಟು ಹೆಚ್ಚಿನ ಮೊತ್ತ ಬಿಡುಗಡೆಯಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಈಆರ್ಥಿಕ ವರ್ಷದಲ್ಲಿ ಜುಲೈ ಅಂತ್ಯದವರೆಗೆ ಕೇಂದ್ರ ಪುರಸ್ಕೃತ ಯೋಜನೆಗಳಿಗಾಗಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ₹ 7,343 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ತಿಳಿಸಿದ್ದಾರೆ.</p>.<p>‘ಪ್ರಜಾವಾಣಿ’ಯ ಗುರುವಾರದ ಸಂಚಿಕೆಯಲ್ಲಿ ಪ್ರಕಟವಾಗಿದ್ದ <strong><a href="https://www.prajavani.net/karnataka-news/the-central-government-has-not-released-the-fund-for-central-sponsored-schemes-863123.html" target="_blank">‘ಕೈಕೊಟ್ಟ ಕೇಂದ್ರ: ಯೋಜನೆ ಸ್ಥಗಿತ’</a></strong> ವರದಿಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಈ ಆರ್ಥಿಕ ವರ್ಷದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರದ ಪಾಲಿನಿಂದ ₹ 17,643 ಕೋಟಿ ನಿಗದಿಪಡಿಸಲಾಗಿದೆ. ಈ ಪೈಕಿ ₹ 7,343 ಕೋಟಿ ಬಿಡುಗಡೆಯಾಗಿದ್ದು, ₹ 6,065 ಕೋಟಿ ರಾಜ್ಯದ ಪಾಲಿನ ಹೊಂದಾಣಿಕೆ ಅನುದಾನವನ್ನೂ ಒದಗಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>ಜುಲೈ ಅಂತ್ಯದ ವೇಳೆಗೆ 22 ಇಲಾಖೆಗಳಲ್ಲಿ ₹ 13,408 ಕೋಟಿ ಅನುದಾನ ಲಭ್ಯವಿತ್ತು. ₹ 8,815 ಕೋಟಿಯನ್ನು ವೆಚ್ಚ ಮಾಡಿದ್ದು, ಶೇಕಡ 46ರಷ್ಟು ಪ್ರಗತಿ ಸಾಧಿಸಲಾಗಿದೆ. 2020–21ನೇ ಆರ್ಥಿಕ ವರ್ಷದಲ್ಲಿ ಇದೇ ಅವಧಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದ ಪಾಲಿನಿಂದ ₹ 6,110 ಕೋಟಿ ಬಿಡುಗಡೆಯಾಗಿತ್ತು. ಈ ಬಾರಿ ಶೇ 6ರಷ್ಟು ಹೆಚ್ಚಿನ ಮೊತ್ತ ಬಿಡುಗಡೆಯಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>