ರಾಜ್ಯಕ್ಕೆ ನೀಡುತ್ತಿರುವ ಆಮ್ಲಜನಕದ ಪ್ರಮಾಣ ಮೇ 11ರಿಂದ 1,015 ಟನ್ಗೆ ಹೆಚ್ಚಳವಾಗಿದೆ ಎಂದು ರಾಜ್ಯ ಸರ್ಕಾರ ಸಲ್ಲಿಸಿದ ವಿವರವನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಪರಿಶೀಲಿಸಿತು. ರಾಜ್ಯದ ಪಾಲನ್ನು 1,200 ಟನ್ಗೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಈ ಹಿಂದೆ ಪೀಠ ನಿರ್ದೇಶನ ನೀಡಿತ್ತು. ಈ ಸಂಬಂಧ ಅನುಸರಣಾ ವರದಿ ಸಲ್ಲಿಸಿಲ್ಲ ಎಂಬುದನ್ನೂ ಪೀಠ ಗಮನಿಸಿತು.