<p><strong>ಬೆಂಗಳೂರು:</strong> ಮೇ 5ರಿಂದ 11ರವರೆಗೆ ದಿನಕ್ಕೆ ಎಷ್ಟು ಪ್ರಮಾಣದಲ್ಲಿ ಆಮ್ಲಜನಕದ ಬೇಡಿಕೆ ಇತ್ತು, ಮುಂದಿನ ಒಂದು ವಾರಕ್ಕೆ ಬೇಕಾಗುವ ಪ್ರಮಾಣ ಎಷ್ಟು ಎಂಬುದರ ವಿವರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ರಾಜ್ಯಕ್ಕೆ ನೀಡುತ್ತಿರುವ ಆಮ್ಲಜನಕದ ಪ್ರಮಾಣ ಮೇ 11ರಿಂದ 1,015 ಟನ್ಗೆ ಹೆಚ್ಚಳವಾಗಿದೆ ಎಂದು ರಾಜ್ಯ ಸರ್ಕಾರ ಸಲ್ಲಿಸಿದ ವಿವರವನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಪರಿಶೀಲಿಸಿತು. ರಾಜ್ಯದ ಪಾಲನ್ನು 1,200 ಟನ್ಗೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಈ ಹಿಂದೆ ಪೀಠ ನಿರ್ದೇಶನ ನೀಡಿತ್ತು. ಈ ಸಂಬಂಧ ಅನುಸರಣಾ ವರದಿ ಸಲ್ಲಿಸಿಲ್ಲ ಎಂಬುದನ್ನೂ ಪೀಠ ಗಮನಿಸಿತು.</p>.<p>ಈ ವಿಷಯದ ಕುರಿತು ಬುಧವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಗುವುದು. ಸಭೆಯ ಫಲಿತಾಂಶವನ್ನು ಪೀಠಕ್ಕೆ ಸಲ್ಲಿಸಲಾಗುವುದು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಮಾಹಿತಿ ನೀಡಿದರು. ವಿಚಾರಣೆಯನ್ನು ಪೀಠ ಗುರುವಾರಕ್ಕೆ ಮುಂದೂಡಿತು.</p>.<p>ರಾಜ್ಯದ ಆಮ್ಲಜನಕ ಕೋಟಾವನ್ನು 865 ಟನ್ನಿಂದ 965 ಟನ್ಗೆ ಹೆಚ್ಚಿಸಲಾಗಿದೆ ಎಂದು ಈ ಹಿಂದಿನ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಪೀಠಕ್ಕೆ ತಿಳಿಸಿತ್ತು. ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ ಆಗಿರುವ ಕಾರಣ ಮೇ 5ರೊಳಗೆ 1,792 ಟನ್ ಅಮ್ಲಜನಕ ಅಗತ್ಯವಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ದಿನಕ್ಕೆ 1,200 ಟನ್ ಆಮ್ಲಜನಕ ಪೂರೈಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮೇ 5ರಿಂದ 11ರವರೆಗೆ ದಿನಕ್ಕೆ ಎಷ್ಟು ಪ್ರಮಾಣದಲ್ಲಿ ಆಮ್ಲಜನಕದ ಬೇಡಿಕೆ ಇತ್ತು, ಮುಂದಿನ ಒಂದು ವಾರಕ್ಕೆ ಬೇಕಾಗುವ ಪ್ರಮಾಣ ಎಷ್ಟು ಎಂಬುದರ ವಿವರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ರಾಜ್ಯಕ್ಕೆ ನೀಡುತ್ತಿರುವ ಆಮ್ಲಜನಕದ ಪ್ರಮಾಣ ಮೇ 11ರಿಂದ 1,015 ಟನ್ಗೆ ಹೆಚ್ಚಳವಾಗಿದೆ ಎಂದು ರಾಜ್ಯ ಸರ್ಕಾರ ಸಲ್ಲಿಸಿದ ವಿವರವನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಪರಿಶೀಲಿಸಿತು. ರಾಜ್ಯದ ಪಾಲನ್ನು 1,200 ಟನ್ಗೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಈ ಹಿಂದೆ ಪೀಠ ನಿರ್ದೇಶನ ನೀಡಿತ್ತು. ಈ ಸಂಬಂಧ ಅನುಸರಣಾ ವರದಿ ಸಲ್ಲಿಸಿಲ್ಲ ಎಂಬುದನ್ನೂ ಪೀಠ ಗಮನಿಸಿತು.</p>.<p>ಈ ವಿಷಯದ ಕುರಿತು ಬುಧವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಗುವುದು. ಸಭೆಯ ಫಲಿತಾಂಶವನ್ನು ಪೀಠಕ್ಕೆ ಸಲ್ಲಿಸಲಾಗುವುದು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಮಾಹಿತಿ ನೀಡಿದರು. ವಿಚಾರಣೆಯನ್ನು ಪೀಠ ಗುರುವಾರಕ್ಕೆ ಮುಂದೂಡಿತು.</p>.<p>ರಾಜ್ಯದ ಆಮ್ಲಜನಕ ಕೋಟಾವನ್ನು 865 ಟನ್ನಿಂದ 965 ಟನ್ಗೆ ಹೆಚ್ಚಿಸಲಾಗಿದೆ ಎಂದು ಈ ಹಿಂದಿನ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಪೀಠಕ್ಕೆ ತಿಳಿಸಿತ್ತು. ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ ಆಗಿರುವ ಕಾರಣ ಮೇ 5ರೊಳಗೆ 1,792 ಟನ್ ಅಮ್ಲಜನಕ ಅಗತ್ಯವಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ದಿನಕ್ಕೆ 1,200 ಟನ್ ಆಮ್ಲಜನಕ ಪೂರೈಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>