‘ಉಪ್ಪು, ಎಣ್ಣೆ ಮತ್ತು ಬೇಳೆ ಸಂಗ್ರಹಿಸಿ ವಿತರಿಸಲು ಕರ್ನಾಟಕ ಆಹಾರ ನಿಗಮಕ್ಕೆ(ಕೆಎಸ್ಸಿಎಸ್ಸಿ) ನಿರ್ದೇಶನ ನೀಡಲಾಗಿದೆ. ಶಾಲೆಗಳ ಆರಂಭವಾಗಿ ಅಲ್ಲಿಯೇ ಅಡುಗೆ ಮಾಡುವ ವ್ಯವಸ್ಥೆ ಮತ್ತೆ ಜಾರಿಗೆ ಬರುವ ತನಕ ಈ ವ್ಯವಸ್ಥೆ ಮುಂದುವರಿಸಲು ಆಯುಕ್ತರಿಗೆ ಸೂಚಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಪೀಠಕ್ಕೆ ಮಾಹಿತಿ ನೀಡಿದರು.