<p><strong>ಬೆಂಗಳೂರು:</strong> ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಡೆಸಿದ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ಬಳಸಿಕೊಳ್ಳುವ ಬಗ್ಗೆ ತನ್ನ ನಿಲುವು ಸ್ಪಷ್ಟಪಡಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಈ ಸಂಬಂಧಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ಪೀಠ,‘ಸಮೀಕ್ಷಾ ವರದಿಯನ್ನು ಸರ್ಕಾರ ಪ್ರಕಟಿಸಬಯಸುತ್ತದೆಯೇ’ ಎಂದು ಕೇಳಿತು.</p>.<p>‘ಜಾತಿ ಜನಗಣತಿಯ ದತ್ತಾಂಶ ಅಥವಾ ವರದಿಯನ್ನು ಸರ್ಕಾರ ಅವಲಂಬಿಸಲು ಬಯಸದಿದ್ದರೆ ವಿಷಯವನ್ನು ಮುಕ್ತಾಯಗೊಳಿಸಬಹುದು’ ಎಂದು ಪೀಠ ಹೇಳಿತು.</p>.<p>‘ಜಾತಿ ಜನಗಣತಿ ನಡೆಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ. ಕೇಂದ್ರ ಸರ್ಕಾರ ಮಾತ್ರ ಈ ಪ್ರಕ್ರಿಯೆ ನಡೆಸಬಹುದು’ ಎಂದು ಕೇಂದ್ರ ಸರ್ಕಾರದ ಪರ ವಕೀಲರು ತಿಳಿಸಿದರು.</p>.<p>‘ಜಾತಿ ಜನಗಣತಿ ನಡೆಸುವುದು ಸಂವಿಧಾನದ 245 ಮತ್ತು 246ನೇ ಪರಿಚ್ಛೇದದ ಉಲ್ಲಂಘನೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಗಣತಿ ನಡೆಸುವ ಅಧಿಕಾರ ಇಲ್ಲ. ಆದರೂ ರಾಜ್ಯ ಸರ್ಕಾರ ₹100 ಕೋಟಿ ವೆಚ್ಚ ಮಾಡಿದೆ’ ಎಂದು ಆರೋಪಿಸಿ ಶಿವರಾಜ್ ಕಣಶೆಟ್ಟಿ ಹಾಗೂ ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಡೆಸಿದ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ಬಳಸಿಕೊಳ್ಳುವ ಬಗ್ಗೆ ತನ್ನ ನಿಲುವು ಸ್ಪಷ್ಟಪಡಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಈ ಸಂಬಂಧಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ಪೀಠ,‘ಸಮೀಕ್ಷಾ ವರದಿಯನ್ನು ಸರ್ಕಾರ ಪ್ರಕಟಿಸಬಯಸುತ್ತದೆಯೇ’ ಎಂದು ಕೇಳಿತು.</p>.<p>‘ಜಾತಿ ಜನಗಣತಿಯ ದತ್ತಾಂಶ ಅಥವಾ ವರದಿಯನ್ನು ಸರ್ಕಾರ ಅವಲಂಬಿಸಲು ಬಯಸದಿದ್ದರೆ ವಿಷಯವನ್ನು ಮುಕ್ತಾಯಗೊಳಿಸಬಹುದು’ ಎಂದು ಪೀಠ ಹೇಳಿತು.</p>.<p>‘ಜಾತಿ ಜನಗಣತಿ ನಡೆಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ. ಕೇಂದ್ರ ಸರ್ಕಾರ ಮಾತ್ರ ಈ ಪ್ರಕ್ರಿಯೆ ನಡೆಸಬಹುದು’ ಎಂದು ಕೇಂದ್ರ ಸರ್ಕಾರದ ಪರ ವಕೀಲರು ತಿಳಿಸಿದರು.</p>.<p>‘ಜಾತಿ ಜನಗಣತಿ ನಡೆಸುವುದು ಸಂವಿಧಾನದ 245 ಮತ್ತು 246ನೇ ಪರಿಚ್ಛೇದದ ಉಲ್ಲಂಘನೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಗಣತಿ ನಡೆಸುವ ಅಧಿಕಾರ ಇಲ್ಲ. ಆದರೂ ರಾಜ್ಯ ಸರ್ಕಾರ ₹100 ಕೋಟಿ ವೆಚ್ಚ ಮಾಡಿದೆ’ ಎಂದು ಆರೋಪಿಸಿ ಶಿವರಾಜ್ ಕಣಶೆಟ್ಟಿ ಹಾಗೂ ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>