<p><strong>ಬೆಂಗಳೂರು: </strong>‘ಕುರುಬ ಸಮುದಾಯವನ್ನು ಎಸ್.ಟಿ ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿ ನಡೆಯತ್ತಿರುವ ಹೋರಾಟಕ್ಕೆ ಸಿದ್ದರಾಮಯ್ಯ ಸಂತೋಷದಿಂದ ಬರುವುದಾದರೆ ಬರಲಿ. ಇಲ್ಲಾಂದ್ರೆ ಸುಮ್ಮನೆ ಇರಲಿ. ಅನಗತ್ಯವಾಗಿ ಗೊಂದಲ ಸೃಷ್ಟಿಸುವುದು ಬೇಡ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಸಲಹೆ ನೀಡಿದರು.</p>.<p>ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಯಾರು ಏನೇ ಮಾತನಾಡಿಕೊಳ್ಳಲಿ. ನಾನಂತೂ ಈ ಹೋರಾಟದಲ್ಲಿ ಇರುತ್ತೇನೆ. ಕಾಗಿನೆಲೆಯಿಂದ ಪಾದಯಾತ್ರೆ ಆರಂಭವಾಗಿದೆ. ಫೆ. 7ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸುಮಾರು ಹತ್ತು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಈ ಸಮಾವೇಶಕ್ಕೆ ಸಿದ್ದರಾಮಯ್ಯ ಬರುತ್ತಾರೊ ಇಲ್ಲವೊ ಗೊತ್ತಿಲ್ಲ’ ಎಂದರು.</p>.<p>‘ಎಸ್.ಟಿ ಹೋರಾಟದ ಹಿಂದೆ ಆರ್ಎಸ್ಎಸ್ ಇದೆ, ಯಾಕೆ ಪಾದಯಾತ್ರೆ ಎಂದೆಲ್ಲ ಹೇಳುವುದು ಯಾಕೆ. ಆಸಕ್ತಿ ಇದ್ದರೆ ಬನ್ನಿ ಇಲ್ಲಾಂದ್ರೆ ಸುಮ್ಮನೆ ಇರಿ. ಅನಗತ್ಯವಾಗಿ ಗೊಂದಲ ಸೃಷ್ಟಿ ಮಾಡುವುದು ಯಾಕೆ. ಸಮುದಾಯಕ್ಕೆ ಎಸ್.ಟಿ ಮಾನ್ಯತೆ ಸಿಗುವ ವಿಶ್ವಾಸ ನಮಗಿದೆ. ಸಿದ್ದರಾಮಯ್ಯ ಮಾಡುತ್ತಿರುವುದು ಒಳ್ಳೆಯದಲ್ಲ’ ಎಂದರು,</p>.<p>‘ಅವರು (ಸಿದ್ದರಾಮಯ್ಯ) ಮುಖ್ಯಮಂತ್ರಿ ಆಗಿದ್ದಾಗ ಯಾಕೆ ಮಾಡಲಿಲ್ಲ. ಯಾರು ಏನು ಬೇಕಾದರೂ ಅಂದುಕೊಳ್ಳಲಿ. ನಾನಂತೂ ಹೋರಾಟದಲ್ಲಿ ಇದ್ದೇ ಇರುತ್ತೇನೆ’ ಎಂದೂ ಹೇಳಿದರು.</p>.<p>ಬಿಜೆಪಿ ಪ್ರಮುಖರ ಸಭೆಯಲ್ಲಿ ಅಮಿತ್ ಶಾ ಮಾರ್ಗದರ್ಶನ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ‘ಮುಂದಿನ ಚುನಾವಣೆಯಲ್ಲಿ ಮತ್ತೆ ಮತ್ತೆ ಅಧಿಕಾರಕ್ಕೆ ತರಬೇಕೆಂದು ಹೇಳಿದ್ದಾರೆ. ಸ್ವತಂತ್ರವಾಗಿ ಪೂರ್ಣ ಪ್ರಮಾಣದಲ್ಲಿ ಪಕ್ಷ ಗೆಲ್ಲಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಮಾರ್ಗದರ್ಶನ ನೀಡಿದ್ದಾರ’ ಎಂದರು.</p>.<p>‘ರಾಜ್ಯದಲ್ಲಿ ಪಕ್ಷದ ಸಂಘಟನೆ ನಡೆಯುತ್ತಿದೆ. ಈ ಹಿಂದೆ 25 ಲೋಕಸಭಾ ಕ್ಷೇತ್ರಗಳನ್ನು ನಾವು (ಬಿಜೆಪಿ) ಗೆದ್ದಿದ್ದೇವೆ. ಉಪಚುನಾವಣೆಯಲ್ಲೂ ಗೆಲುವು ಸಾಧಿಸಿದ್ದೇವೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಗಮನಾರ್ಹ ಸಾಧನೆ ಮಾಡಿದ್ದೇವೆ’ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಕುರುಬ ಸಮುದಾಯವನ್ನು ಎಸ್.ಟಿ ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿ ನಡೆಯತ್ತಿರುವ ಹೋರಾಟಕ್ಕೆ ಸಿದ್ದರಾಮಯ್ಯ ಸಂತೋಷದಿಂದ ಬರುವುದಾದರೆ ಬರಲಿ. ಇಲ್ಲಾಂದ್ರೆ ಸುಮ್ಮನೆ ಇರಲಿ. ಅನಗತ್ಯವಾಗಿ ಗೊಂದಲ ಸೃಷ್ಟಿಸುವುದು ಬೇಡ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಸಲಹೆ ನೀಡಿದರು.</p>.<p>ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಯಾರು ಏನೇ ಮಾತನಾಡಿಕೊಳ್ಳಲಿ. ನಾನಂತೂ ಈ ಹೋರಾಟದಲ್ಲಿ ಇರುತ್ತೇನೆ. ಕಾಗಿನೆಲೆಯಿಂದ ಪಾದಯಾತ್ರೆ ಆರಂಭವಾಗಿದೆ. ಫೆ. 7ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸುಮಾರು ಹತ್ತು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಈ ಸಮಾವೇಶಕ್ಕೆ ಸಿದ್ದರಾಮಯ್ಯ ಬರುತ್ತಾರೊ ಇಲ್ಲವೊ ಗೊತ್ತಿಲ್ಲ’ ಎಂದರು.</p>.<p>‘ಎಸ್.ಟಿ ಹೋರಾಟದ ಹಿಂದೆ ಆರ್ಎಸ್ಎಸ್ ಇದೆ, ಯಾಕೆ ಪಾದಯಾತ್ರೆ ಎಂದೆಲ್ಲ ಹೇಳುವುದು ಯಾಕೆ. ಆಸಕ್ತಿ ಇದ್ದರೆ ಬನ್ನಿ ಇಲ್ಲಾಂದ್ರೆ ಸುಮ್ಮನೆ ಇರಿ. ಅನಗತ್ಯವಾಗಿ ಗೊಂದಲ ಸೃಷ್ಟಿ ಮಾಡುವುದು ಯಾಕೆ. ಸಮುದಾಯಕ್ಕೆ ಎಸ್.ಟಿ ಮಾನ್ಯತೆ ಸಿಗುವ ವಿಶ್ವಾಸ ನಮಗಿದೆ. ಸಿದ್ದರಾಮಯ್ಯ ಮಾಡುತ್ತಿರುವುದು ಒಳ್ಳೆಯದಲ್ಲ’ ಎಂದರು,</p>.<p>‘ಅವರು (ಸಿದ್ದರಾಮಯ್ಯ) ಮುಖ್ಯಮಂತ್ರಿ ಆಗಿದ್ದಾಗ ಯಾಕೆ ಮಾಡಲಿಲ್ಲ. ಯಾರು ಏನು ಬೇಕಾದರೂ ಅಂದುಕೊಳ್ಳಲಿ. ನಾನಂತೂ ಹೋರಾಟದಲ್ಲಿ ಇದ್ದೇ ಇರುತ್ತೇನೆ’ ಎಂದೂ ಹೇಳಿದರು.</p>.<p>ಬಿಜೆಪಿ ಪ್ರಮುಖರ ಸಭೆಯಲ್ಲಿ ಅಮಿತ್ ಶಾ ಮಾರ್ಗದರ್ಶನ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ‘ಮುಂದಿನ ಚುನಾವಣೆಯಲ್ಲಿ ಮತ್ತೆ ಮತ್ತೆ ಅಧಿಕಾರಕ್ಕೆ ತರಬೇಕೆಂದು ಹೇಳಿದ್ದಾರೆ. ಸ್ವತಂತ್ರವಾಗಿ ಪೂರ್ಣ ಪ್ರಮಾಣದಲ್ಲಿ ಪಕ್ಷ ಗೆಲ್ಲಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಮಾರ್ಗದರ್ಶನ ನೀಡಿದ್ದಾರ’ ಎಂದರು.</p>.<p>‘ರಾಜ್ಯದಲ್ಲಿ ಪಕ್ಷದ ಸಂಘಟನೆ ನಡೆಯುತ್ತಿದೆ. ಈ ಹಿಂದೆ 25 ಲೋಕಸಭಾ ಕ್ಷೇತ್ರಗಳನ್ನು ನಾವು (ಬಿಜೆಪಿ) ಗೆದ್ದಿದ್ದೇವೆ. ಉಪಚುನಾವಣೆಯಲ್ಲೂ ಗೆಲುವು ಸಾಧಿಸಿದ್ದೇವೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಗಮನಾರ್ಹ ಸಾಧನೆ ಮಾಡಿದ್ದೇವೆ’ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>