<p><strong>ಬೆಂಗಳೂರು:</strong> ಬೆಂಗಳೂರು ಹೊರ ವಲಯದ ಹಲವೆಡೆ ಶುಕ್ರವಾರ ಬೆಳಗ್ಗೆ ಭಾರಿ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಆದರೆ ಇದು ಭೂಕಂಪನವಲ್ಲ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕೆಎಸ್ಎನ್ಡಿಎಂಸಿ ಸ್ಪಷ್ಟಪಡಿಸಿದೆ.</p>.<p>ಹೆಮ್ಮಿಗೆಪುರ, ಕೆಂಗೇರಿ, ಜ್ಞಾನಭಾರತಿ, ರಾಜರಾಜೇಶ್ವರಿ ನಗರ ಮತ್ತು ಕಗ್ಗಲಿಪುರದ ಕೆಲ ಭಾಗಗಳಲ್ಲಿ ಭಾರಿ ಸದ್ದಿನೊಂದಿಗೆ ಭೂಮಿ ಕಂಪಿಸಿತು ಎಂದು ನಿವಾಸಿಗಳು ಹೇಳಿದ್ದರು. ಬೆಳಗ್ಗೆ 11.50 ರಿಂದ ಮಧ್ಯಾಹ್ನ 12.15ರ ಅವಧಿಯಲ್ಲಿ ಈ ವಿದ್ಯಮಾನ ಸಂಭವಿಸಿದೆ ಎಂದು ಹೇಳಲಾಗಿದೆ.</p>.<p>ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೆಎಸ್ಎನ್ಡಿಎಂಸಿ, ಬೆಂಗಳೂರಿನಲ್ಲಿ ಭೂಕಂಪನ ಆಗಿಲ್ಲ ಎಂದಿದೆ.</p>.<p>‘ಬೆಳಗ್ಗೆ 11.50ರಿಂದ ಮಧ್ಯಾಹ್ನ 12.15ರ ಅವಧಿಯಲ್ಲಿ ಭೂಕಂಪನ / ಸಂಭವನೀಯ ಭೂಕಂಪದ ಸಂಕೇತಗಳು ಹೊಮ್ಮಿವೆಯೇ ಎಂಬುದನ್ನು ವಿಶ್ಲೇಷಕರು ಪರಿಶೀಲಿಸಿದ್ದಾರೆ. ಆದರೆ, ಅಂಥ ಯಾವುದೇ ಸಂಕೇತಗಳು ಕಂಡುಬಂದಿಲ್ಲ’ಎಂದು ಕೆಎಸ್ಎನ್ಡಿಎಂಸಿ ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ಹೊರ ವಲಯದ ಹಲವೆಡೆ ಶುಕ್ರವಾರ ಬೆಳಗ್ಗೆ ಭಾರಿ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಆದರೆ ಇದು ಭೂಕಂಪನವಲ್ಲ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕೆಎಸ್ಎನ್ಡಿಎಂಸಿ ಸ್ಪಷ್ಟಪಡಿಸಿದೆ.</p>.<p>ಹೆಮ್ಮಿಗೆಪುರ, ಕೆಂಗೇರಿ, ಜ್ಞಾನಭಾರತಿ, ರಾಜರಾಜೇಶ್ವರಿ ನಗರ ಮತ್ತು ಕಗ್ಗಲಿಪುರದ ಕೆಲ ಭಾಗಗಳಲ್ಲಿ ಭಾರಿ ಸದ್ದಿನೊಂದಿಗೆ ಭೂಮಿ ಕಂಪಿಸಿತು ಎಂದು ನಿವಾಸಿಗಳು ಹೇಳಿದ್ದರು. ಬೆಳಗ್ಗೆ 11.50 ರಿಂದ ಮಧ್ಯಾಹ್ನ 12.15ರ ಅವಧಿಯಲ್ಲಿ ಈ ವಿದ್ಯಮಾನ ಸಂಭವಿಸಿದೆ ಎಂದು ಹೇಳಲಾಗಿದೆ.</p>.<p>ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೆಎಸ್ಎನ್ಡಿಎಂಸಿ, ಬೆಂಗಳೂರಿನಲ್ಲಿ ಭೂಕಂಪನ ಆಗಿಲ್ಲ ಎಂದಿದೆ.</p>.<p>‘ಬೆಳಗ್ಗೆ 11.50ರಿಂದ ಮಧ್ಯಾಹ್ನ 12.15ರ ಅವಧಿಯಲ್ಲಿ ಭೂಕಂಪನ / ಸಂಭವನೀಯ ಭೂಕಂಪದ ಸಂಕೇತಗಳು ಹೊಮ್ಮಿವೆಯೇ ಎಂಬುದನ್ನು ವಿಶ್ಲೇಷಕರು ಪರಿಶೀಲಿಸಿದ್ದಾರೆ. ಆದರೆ, ಅಂಥ ಯಾವುದೇ ಸಂಕೇತಗಳು ಕಂಡುಬಂದಿಲ್ಲ’ಎಂದು ಕೆಎಸ್ಎನ್ಡಿಎಂಸಿ ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>