ಮತದಾರರ ಅಭಿಪ್ರಾಯದಂತೆ ಮುಂದಿನ ನಡೆ: ಜಿ.ಟಿ.ದೇವೇಗೌಡ

ಮೈಸೂರು: ‘ಜೆಡಿಎಸ್ನಲ್ಲೇ ಉಳಿಯಬೇಕಾ ಅಥವಾ ಬೇರೆ ಯಾವುದಾದರೂ ಪಕ್ಷಕ್ಕೆ ಸೇರಬೇಕೇ ಎಂಬುದನ್ನು ಕ್ಷೇತ್ರದ ಮತದಾರರ ಅಭಿಪ್ರಾಯ ಪಡೆದು ನಿರ್ಧರಿಸುತ್ತೇನೆ’ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿದರು.
ಶನಿವಾರ ಮಾಧ್ಯಮದವರ ಜತೆ ಮಾತನಾಡಿ, ‘ಈ ಹಿಂದೆ ಮತದಾರರ ಅಭಿಪ್ರಾಯ ಪಡೆಯದೆ ಬಿಜೆಪಿಗೆ ಹೋಗಿ, ಹುಣಸೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದೆ. ಅಂತಹ ತಪ್ಪು ಮತ್ತೆ ಮಾಡುವುದಿಲ್ಲ. ವಿಧಾನಸಭೆ ಚುನಾವಣೆಗೆ ಇನ್ನೂ 23 ತಿಂಗಳುಗಳು ಬಾಕಿಯಿವೆ. ಕಾಂಗ್ರೆಸ್ ಅಥವಾ ಬಿಜೆಪಿ ಸೇರಬೇಕೇ, ಜೆಡಿಎಸ್ನಲ್ಲೇ ಮುಂದುವರಿಯಬೇಕೇ ಎಂಬ ಪ್ರಶ್ನೆಯನ್ನು ನನ್ನ ಕ್ಷೇತ್ರದ ಮತದಾರರ ಮುಂದೆ ಇಡುತ್ತೇನೆ. ಅವರ ಅಭಿಪ್ರಾಯ ಪಡೆದು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ’ ಎಂದು ಸ್ಪಷ್ಟಪಡಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.