ಶನಿವಾರ ಮಾಧ್ಯಮದವರ ಜತೆ ಮಾತನಾಡಿ, ‘ಈ ಹಿಂದೆ ಮತದಾರರ ಅಭಿಪ್ರಾಯ ಪಡೆಯದೆ ಬಿಜೆಪಿಗೆ ಹೋಗಿ, ಹುಣಸೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದೆ. ಅಂತಹ ತಪ್ಪು ಮತ್ತೆ ಮಾಡುವುದಿಲ್ಲ. ವಿಧಾನಸಭೆ ಚುನಾವಣೆಗೆ ಇನ್ನೂ 23 ತಿಂಗಳುಗಳು ಬಾಕಿಯಿವೆ. ಕಾಂಗ್ರೆಸ್ ಅಥವಾ ಬಿಜೆಪಿ ಸೇರಬೇಕೇ, ಜೆಡಿಎಸ್ನಲ್ಲೇ ಮುಂದುವರಿಯಬೇಕೇ ಎಂಬ ಪ್ರಶ್ನೆಯನ್ನು ನನ್ನ ಕ್ಷೇತ್ರದ ಮತದಾರರ ಮುಂದೆ ಇಡುತ್ತೇನೆ. ಅವರ ಅಭಿಪ್ರಾಯ ಪಡೆದು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ’ ಎಂದು ಸ್ಪಷ್ಟಪಡಿಸಿದರು.