<p><strong>ವಿಜಯಪುರ: </strong>ಕೊರೊನಾ ವೈರಸ್ ಹರಡುವುನ್ನು ನಿಯಂತ್ರಿಸುವ ಸಂಬಂಧ ರಾಜ್ಯ ಸರ್ಕಾರ ರಾತ್ರಿ ಕರ್ಫ್ಯೂ ಜಾರಿಗೊಳಿಸಿರುವ ಕ್ರಮಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ ಕರ್ಫ್ಯೂಗೆ ಅರ್ಥವೇ ಇಲ್ಲ. ರಾತ್ರಿ ಕರ್ಫ್ಯೂ ವಿಧಿಸಿರುವುದರಿಂದ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಜಗಳಕ್ಕೆ ಕಾರಣವಾಗಲಿದೆ. ಇಂಥ ಕಿರಿಕಿರಿಗಳಿಗೆ ಅವಕಾಶ ನೀಡುವ ಅರ್ಧಂಬರ್ಧ ನಿರ್ಣಯ ಮಾಡದೇ ರಾತ್ರಿ ಕರ್ಫ್ಯೂ ತೆಗೆದು ಹಾಕಬೇಕು ಎಂದು ಆಗ್ರಹಿಸಿದರು.</p>.<p>ರಾತ್ರಿ 11ರಿಂದ ಬೆಳಿಗ್ಗೆ 6ರ ವರೆಗೆ ಬಹುತೇಕರು ಮನೆಯಲ್ಲೆ ಇರುತ್ತಾರೆ. ರಾತ್ರಿ ಕರ್ಫ್ಯೂನಿಂದ ಯಾವುದೇ ಉಪಯೋಗವಿಲ್ಲ. ಕೊರೊನಾ ರಾತ್ರಿ ಹೆಚ್ಚಾಗುತ್ತೋ, ಹಗಲು ಹೆಚ್ಚಾಗುತ್ತೋ ನಮಗೂ ಗೊತ್ತಿಲ್ಲ. ವೈಜ್ಞಾನಿಕ ಮತ್ತು ವೈದ್ಯಕೀಯ ಸಲಹೆ ಪಡೆದು ನಿರ್ಧರಿಸಬೇಕು ಎಂದು ಸಲಹೆ ನೀಡಿದರು.</p>.<p>ಒಂದು ಕಡೆ ಕ್ರಿಸ್ಮಸ್ನ ಎಲ್ಲ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದಾಗಿ ಮುಖ್ಯಮಂತ್ರಿ ಗೊಂದಲದ ಹೇಳಿಕೆ ನೀಡಿದ್ದಾರೆ. ಈ ಕೂಡಲೇ ರಾತ್ರಿ ಕರ್ಫ್ಯೂ ವಿಚಾರವನ್ನು ಮರು ಪರಿಶೀಲನೆ ಮಾಡಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಕೊರೊನಾ ವೈರಸ್ ಹರಡುವುನ್ನು ನಿಯಂತ್ರಿಸುವ ಸಂಬಂಧ ರಾಜ್ಯ ಸರ್ಕಾರ ರಾತ್ರಿ ಕರ್ಫ್ಯೂ ಜಾರಿಗೊಳಿಸಿರುವ ಕ್ರಮಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ ಕರ್ಫ್ಯೂಗೆ ಅರ್ಥವೇ ಇಲ್ಲ. ರಾತ್ರಿ ಕರ್ಫ್ಯೂ ವಿಧಿಸಿರುವುದರಿಂದ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಜಗಳಕ್ಕೆ ಕಾರಣವಾಗಲಿದೆ. ಇಂಥ ಕಿರಿಕಿರಿಗಳಿಗೆ ಅವಕಾಶ ನೀಡುವ ಅರ್ಧಂಬರ್ಧ ನಿರ್ಣಯ ಮಾಡದೇ ರಾತ್ರಿ ಕರ್ಫ್ಯೂ ತೆಗೆದು ಹಾಕಬೇಕು ಎಂದು ಆಗ್ರಹಿಸಿದರು.</p>.<p>ರಾತ್ರಿ 11ರಿಂದ ಬೆಳಿಗ್ಗೆ 6ರ ವರೆಗೆ ಬಹುತೇಕರು ಮನೆಯಲ್ಲೆ ಇರುತ್ತಾರೆ. ರಾತ್ರಿ ಕರ್ಫ್ಯೂನಿಂದ ಯಾವುದೇ ಉಪಯೋಗವಿಲ್ಲ. ಕೊರೊನಾ ರಾತ್ರಿ ಹೆಚ್ಚಾಗುತ್ತೋ, ಹಗಲು ಹೆಚ್ಚಾಗುತ್ತೋ ನಮಗೂ ಗೊತ್ತಿಲ್ಲ. ವೈಜ್ಞಾನಿಕ ಮತ್ತು ವೈದ್ಯಕೀಯ ಸಲಹೆ ಪಡೆದು ನಿರ್ಧರಿಸಬೇಕು ಎಂದು ಸಲಹೆ ನೀಡಿದರು.</p>.<p>ಒಂದು ಕಡೆ ಕ್ರಿಸ್ಮಸ್ನ ಎಲ್ಲ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದಾಗಿ ಮುಖ್ಯಮಂತ್ರಿ ಗೊಂದಲದ ಹೇಳಿಕೆ ನೀಡಿದ್ದಾರೆ. ಈ ಕೂಡಲೇ ರಾತ್ರಿ ಕರ್ಫ್ಯೂ ವಿಚಾರವನ್ನು ಮರು ಪರಿಶೀಲನೆ ಮಾಡಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>