<p><strong>ಬೆಂಗಳೂರು</strong>: ‘ವೀರಶೈವ ಜಂಗಮ ಸಮುದಾಯದವರು ಬೇಡ ಜಂಗಮರೆಂದು ನಕಲಿ ಜಾತಿ ಪ್ರಮಾಣ ಪತ್ರ ಪಡೆಯುವ ಸಲುವಾಗಿ ಬೇಡ ಜಂಗಮರ ಸಂವಿಧಾನಬದ್ಧ ಹಕ್ಕುಗಳನ್ನು ಕಸಿಯುವ ಹುನ್ನಾರ ನಡೆಸುತ್ತಿದ್ದಾರೆ’ ಎಂದು ನಕಲಿ ಬೇಡ ಜಂಗಮರ ವಿರೋಧಿ ವೇದಿಕೆಯ ಸಂಚಾಲಕ ಅರ್ಜುನ ಭದ್ರೆ ಆರೋಪಿಸಿದರು.</p>.<p>ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೇಡ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವ ಕುರಿತು ನಿಡುಮಾಮಿಡಿ ಮಠದ ಚನ್ನಮಲ್ಲ ಸ್ವಾಮೀಜಿ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದೆ. ಇದು ಖಂಡನೀಯ’ ಎಂದರು.</p>.<p>‘ಬಸವಣ್ಣನವರ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡಿರುವ ನಿಡುಮಾಮಿಡಿ ಸ್ವಾಮೀಜಿ ಅವರ ಈ ನಡೆ ಆಘಾತಕಾರಿ. ಅಂತರಾಳದಲ್ಲಿ ಮೋಹನ ಭಾಗವತರ ವಿಚಾರಗಳನ್ನು ಹೊಂದಿರುವ ಇವರನ್ನು ಅರ್ಥಮಾಡಿಕೊಳ್ಳಲು ದಲಿತ ಸಮುದಾಯಕ್ಕೆ ವಿಳಂಬವಾಯಿತು’ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ವೀರಶೈವ ಜಂಗಮ ಸಮುದಾಯದವರು ಬೇಡ ಜಂಗಮರೆಂದು ನಕಲಿ ಜಾತಿ ಪ್ರಮಾಣ ಪತ್ರ ಪಡೆಯುವ ಸಲುವಾಗಿ ಬೇಡ ಜಂಗಮರ ಸಂವಿಧಾನಬದ್ಧ ಹಕ್ಕುಗಳನ್ನು ಕಸಿಯುವ ಹುನ್ನಾರ ನಡೆಸುತ್ತಿದ್ದಾರೆ’ ಎಂದು ನಕಲಿ ಬೇಡ ಜಂಗಮರ ವಿರೋಧಿ ವೇದಿಕೆಯ ಸಂಚಾಲಕ ಅರ್ಜುನ ಭದ್ರೆ ಆರೋಪಿಸಿದರು.</p>.<p>ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೇಡ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವ ಕುರಿತು ನಿಡುಮಾಮಿಡಿ ಮಠದ ಚನ್ನಮಲ್ಲ ಸ್ವಾಮೀಜಿ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದೆ. ಇದು ಖಂಡನೀಯ’ ಎಂದರು.</p>.<p>‘ಬಸವಣ್ಣನವರ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡಿರುವ ನಿಡುಮಾಮಿಡಿ ಸ್ವಾಮೀಜಿ ಅವರ ಈ ನಡೆ ಆಘಾತಕಾರಿ. ಅಂತರಾಳದಲ್ಲಿ ಮೋಹನ ಭಾಗವತರ ವಿಚಾರಗಳನ್ನು ಹೊಂದಿರುವ ಇವರನ್ನು ಅರ್ಥಮಾಡಿಕೊಳ್ಳಲು ದಲಿತ ಸಮುದಾಯಕ್ಕೆ ವಿಳಂಬವಾಯಿತು’ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>