ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕ್ಷೀರ ಭಾಗ್ಯ’ 2 ತಿಂಗಳು ಪ್ರತಿ ಶಾಲಾ ವಿದ್ಯಾರ್ಥಿಗೆ ಅರ್ಧ ಕೆ.ಜಿ ಹಾಲಿನ ಪುಡಿ

₹ 163.71 ಕೋಟಿ ವೆಚ್ಚ: 56.65 ಲಕ್ಷ ವಿದ್ಯಾರ್ಥಿಗಳಿಗೆ ಹಾಲಿನ ಪುಡಿ
Last Updated 18 ಜೂನ್ 2021, 19:31 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಸಕ್ತ ಸಾಲಿನ ಜೂನ್‌ ಮತ್ತು ಜುಲೈ ತಿಂಗಳಲ್ಲಿ (ಎರಡು ತಿಂಗಳು) ಪ್ರತಿ ಶಾಲಾ ವಿದ್ಯಾರ್ಥಿಗೆ ಆಹಾರಧಾನ್ಯದ ಜೊತೆಗೆ ತಲಾ ಅರ್ಧ ಕಿಲೋ ಕೆನೆಭರಿತ ಹಾಲಿನ ಪುಡಿ ವಿತರಿಸುವ ‘ಕ್ಷೀರ ಭಾಗ್ಯ ಯೋಜನೆ’ ಅನುಷ್ಠಾನಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಈ ಯೋಜನೆಯಡಿ 30 ಜಿಲ್ಲೆಗಳ ಒಟ್ಟು 56,64,873 ಮಕ್ಕಳಿಗೆ ಹಾಲಿನ ಪುಡಿ ವಿತರಣೆ ಆಗಲಿದೆ. ಒಟ್ಟು ₹ 163.71 ಕೋಟಿ ವೆಚ್ಚ ಅಂದಾಜಿಸಲಾಗಿದೆ. ಶಿಕ್ಷಣ ಇಲಾಖೆಗೆ ನೀಡಿದ ವಾರ್ಷಿಕ ಅನುದಾನದಲ್ಲಿ ಜಿಲ್ಲಾ ವಲಯಕ್ಕೆ ವೇತನೇತರ ವೆಚ್ಚಕ್ಕೆ ಹಂಚಿಕೆಯಾದ ಅನುದಾನದಲ್ಲಿ ₹ 117.97 ಕೋಟಿ, ಪರಿಶಿಷ್ಟ ಜಾತಿ ಉಪ ಯೋಜನೆಯಿಂದ (ಎಸ್‌ಸಿಪಿ) ₹ 21.82 ಕೋಟಿ, ಪರಿಶಿಷ್ಟ ಪಂಗಡಗಳ ಉಪ ಯೋಜನೆಯಿಂದ (ಟಿಎಸ್‌ಪಿ) 23.91 ಕೋಟಿ ಬಳಕೆಯಾಗಲಿದೆ.

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳದಿಂದ (ಕೆಎಂಎಫ್‌) ಹಾಲಿನ ಪುಡಿ ಖರೀದಿಸಿ ವಿತರಿಸಲು ನಿರ್ಧರಿಸಲಾಗಿದೆ. ಕೆಎಂಎಫ್‌ ಹಾಲಿನ ಪುಡಿ ದರವನ್ನು ಪ್ರತಿ ಕಿಲೋಗೆ ₹ 275 (ಜಿಎಎಸ್‌ಟಿ) ಪ್ರತ್ಯೇಕ ನಿಗದಿಪಡಿಸಿದೆ.

ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ಅಡುಗೆ ಸಿಬ್ಬಂದಿ ಮಕ್ಕಳ ಹೆಸರು, ತರಗತಿಯನ್ನು ನಮೂದಿಸಿ, ಪೋಷಕರಿಂದ ಸ್ವೀಕೃತಿ ಸಹಿ ಪಡೆದು ಹಾಲಿನ ಪುಡಿ ವಿತರಿಸಬೇಕು. ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರೊಬ್ಬರು ಹಾಜರಿರಬೇಕು ಮತ್ತು ಅವರ ಸಹಿಯನ್ನೂ ಪಡೆಯಬೇಕು ಎಂದು
ಸ್ಪಷ್ಟಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT