ಹುಬ್ಬಳ್ಳಿ–ಧಾರವಾಡ, ವಿಜಯಪುರ, ಬಳ್ಳಾರಿ, ಬೀದರ್, ಕಲಬುರ್ಗಿ, ಶಿವಮೊಗ್ಗ, ರಾಯಚೂರಿನಂತ ಸೂಕ್ಷ್ಮ ಪ್ರದೇಶಗಳಲ್ಲಿ ಮತೀಯ ಶಕ್ತಿಗಳು ಬಲಿಷ್ಠವಾಗಿವೆ. ಈ ಬಗ್ಗೆ ಗುಪ್ತಚರ ಇಲಾಖೆ ಬಳಿಯೂ ಮಾಹಿತಿ ಇದೆ. ಮತೀಯ ಶಕ್ತಿಗಳು ತಮ್ಮ ಮನೆ, ಅಂಗಡಿಗಳಲ್ಲಿ ಬಚ್ಚಿಟ್ಟಿರುವ ಗನ್, ತಲವಾರ್, ಕಲ್ಲು ಸೇರಿದಂತೆ ಮಾರಕಾಸ್ತ್ರಗಳನ್ನುಶೋಧಿಸಿ, ವಶಕ್ಕೆ ಪಡೆಯಲು ಗೃಹ ಇಲಾಖೆ ಕಾರ್ಯಪ್ರವೃತ್ತವಾಗಬೇಕು ಎಂದು ಒತ್ತಾಯಿಸಿದರು.