ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಕ್ಕೆ ಬಲಿಷ್ಠ ಗೃಹ ಸಚಿವ ಬೇಕು: ಶಾಸಕ ಯತ್ನಾಳ

Last Updated 18 ಏಪ್ರಿಲ್ 2022, 13:08 IST
ಅಕ್ಷರ ಗಾತ್ರ

ವಿಜಯಪುರ: ‘ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳನ್ನು ನೋಡಿದರೆ ಒಬ್ಬ ಬಲಿಷ್ಠ ಗೃಹ ಸಚಿವರ ಅಗತ್ಯವಿದೆ ಎನಿಸುತ್ತದೆ. ಈ ಸಂಬಂಧ ಮಾಧ್ಯಮಗಳಲ್ಲಿ ಪ್ರಕಟಣೆ ಹೊರಡಿಸುವುದು ಉತ್ತಮ’ ಎಂದುಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವ್ಯಂಗ್ಯವಾಡಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವಆರಗ ಜ್ಞಾನೇಂದ್ರ ವಿರುದ್ಧ ಪರೋಕ್ಷವಾಗಿ ಹರಿಹಾಯ್ದರು.

ಪರಿಶೀಲಿಸುತ್ತೇನೆ, ಕ್ರಮಕೈಗೊಳ್ಳುತ್ತೇನೆ ಎಂದು ಗೃಹ ಸಚಿವರು ಸಾಫ್ಟ್‌ ಕಾರ್ನರ್‌ ಹೇಳಿಕೆ ನೀಡಿದರೆ ಪ್ರಯೋಜನವಿಲ್ಲ. ಮತೀಯ ಶಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

ಹುಬ್ಬಳ್ಳಿ–ಧಾರವಾಡ, ವಿಜಯಪುರ, ಬಳ್ಳಾರಿ, ಬೀದರ್‌, ಕಲಬುರ್ಗಿ, ಶಿವಮೊಗ್ಗ, ರಾಯಚೂರಿನಂತ ಸೂಕ್ಷ್ಮ ಪ್ರದೇಶಗಳಲ್ಲಿ ಮತೀಯ ಶಕ್ತಿಗಳು ಬಲಿಷ್ಠವಾಗಿವೆ. ಈ ಬಗ್ಗೆ ಗುಪ್ತಚರ ಇಲಾಖೆ ಬಳಿಯೂ ಮಾಹಿತಿ ಇದೆ. ಮತೀಯ ಶಕ್ತಿಗಳು ತಮ್ಮ ಮನೆ, ಅಂಗಡಿಗಳಲ್ಲಿ ಬಚ್ಚಿಟ್ಟಿರುವ ಗನ್‌, ತಲವಾರ್‌, ಕಲ್ಲು ಸೇರಿದಂತೆ ಮಾರಕಾಸ್ತ್ರಗಳನ್ನುಶೋಧಿಸಿ, ವಶಕ್ಕೆ ಪಡೆಯಲು ಗೃಹ ಇಲಾಖೆ ಕಾರ್ಯಪ್ರವೃತ್ತವಾಗಬೇಕು ಎಂದು ಒತ್ತಾಯಿಸಿದರು.

ಘಟನೆ ಹಿಂದೆ ಕಾಂಗ್ರೆಸ್‌ನವರ ಕುಮ್ಮಕ್ಕಿದೆ, ಅವರ ಕುಮ್ಮಕ್ಕಿದೆ, ಇವರ ಕುಮ್ಮಕ್ಕಿದೆ ಎಂಬ ಹೇಳಿಕೆ ನೀಡುವುದನ್ನು ಬಿಡಿ, ಜನ ಈ ಕಥೆ ಕೇಳುವುದಿಲ್ಲ. ಅಧಿಕಾರ ಬಿಜೆಪಿಗೆ ಕೊಟ್ಟಿದ್ದೇವೆ ಏನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸುತ್ತಾರೆ ಎಂದರು.

ಸಂಪುಟ ವಿಸ್ತರಣೆ ಶೀಘ್ರ

ರಾಜ್ಯ ಸಚಿವ ಸಂಪುಟ ಶೀಘ್ರ ವಿಸ್ತರಣೆ ಮಾಡುವುದಾಗಿಮುಖ್ಯಮಂತ್ರಿ ಹೇಳಿದ್ದಾರೆ. ಹೊಸಪೇಟೆಯಲ್ಲಿ ನಡೆದ ರಾಜ್ಯ ಕಾರ್ಯಕಾರಣಿಯಲ್ಲೂ ಈ ಬಗ್ಗೆ ಚರ್ಚೆಯಾಗಿದೆ ಎಂದು ಯತ್ನಾಳ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT