ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮದುರ್ಗ: ಬಸವೇಶ್ವರರ ಪ್ರತಿಮೆ ವಿರೂಪ

Last Updated 8 ನವೆಂಬರ್ 2020, 21:06 IST
ಅಕ್ಷರ ಗಾತ್ರ

ರಾಮದುರ್ಗ: ತಾಲ್ಲೂಕಿನ ಬಿಜಗುಪ್ಪಿ ಗ್ರಾಮದ ಪ್ರವೇಶ ದ್ವಾರದ ಬಳಿಯ ಜಗಜ್ಯೋತಿ ಬಸವೇಶ್ವರರ ಪ್ರತಿಮೆಯ ಎಡಗೈಯನ್ನು ಕಿಡಿಗೇಡಿಗಳು ತುಂಡರಿಸಿರುವ ಪ್ರಕರಣ ಭಾನುವಾರ ಬೆಳಕಿಗೆ ಬಂದಿದೆ.

ಬಸವೇಶ್ವರ ಪ್ರತಿಮೆಯ ಇಷ್ಟಲಿಂಗವಿದ್ದ ಎಡಗೈಯನ್ನು ಕಿಡಿಗೇಡಿಗಳು ತುಂಡರಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಜನ ಜಮಾಯಿಸಿ, ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಕಟಕೋಳ ಪೊಲೀಸ್‌ ಠಾಣೆಯ ಸಿಬ್ಬಂದಿ ಪ್ರತಿಮೆಯನ್ನು ಸ್ಥಳಾಂತರಿಸಿದ್ದು, ಬಿಗಿಬಂದೋಬಸ್ತ್‌ ಏರ್ಪಡಿಸಿದ್ದಾರೆ.

ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿ, ‘ಪ್ರತಿಮೆಯನ್ನು ವಿರೂಪಗೊಳಿಸಿರುವ ಕಿಡಿಗೇಡಿಗಳನ್ನು ತಕ್ಷಣ ಪತ್ತೆ ಹಚ್ಚಿ, ಬಂಧಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT