<p><strong>ಬೆಂಗಳೂರು: </strong>ಕಾಂಗ್ರೆಸ್ ಸದಸ್ಯರ ತೀವ್ರ ವಿರೋಧದ ಮಧ್ಯೆಯೂ ಪಂಚಾಯಿತಿಗಳ ಅಧ್ಯಕ್ಷ–ಉಪಾಧ್ಯಕ್ಷರ ಅಧಿಕಾರ ಅವಧಿ ಮೊಟಕುಗೊಳಿಸುವ ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ರಾಜ್ (ತಿದ್ದುಪಡಿ) ಮಸೂದೆಗೆ ವಿಧಾನಸಭೆಯಲ್ಲಿ ಸರ್ಕಾರ ಶುಕ್ರವಾರ ಒಪ್ಪಿಗೆ ಪಡೆಯಿತು.</p>.<p>ಕೆ.ಆರ್.ರಮೇಶ್ ಕುಮಾರ್ ಸಮಿತಿಯ ಶಿಫಾರಸಿನ ಆಧಾರದಲ್ಲಿ ಗ್ರಾಮ ಸ್ವರಾಜ್ ಕಾಯ್ದೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಿದ್ದುಪಡಿ ತಂದಿತ್ತು. ಅಧ್ಯಕ್ಷರ ಅವಧಿಯನ್ನು ಐದು ವರ್ಷಕ್ಕೆ ಏರಿಸಲಾಗಿತ್ತು. ಇದೀಗ ತಂದಿರುವ ತಿದ್ದುಪಡಿ ಪ್ರಕಾರ, ಅಧಿಕಾರದ ಅವಧಿ ಎರಡೂವರೆ ವರ್ಷಕ್ಕೆ ಇಳಿಯಲಿದೆ.</p>.<p>ಮಸೂದೆ ಮಂಡಿಸಿದ ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ‘ಹಲವು ಪ್ರಕರಣಗಳಲ್ಲಿ ಹೈಕೋರ್ಟ್ ಆದೇಶ ಹಾಗೂ ಅಡ್ವೊಕೇಟ್ ಜನರಲ್, ಹಣಕಾಸು ಇಲಾಖೆಯ ಸಲಹೆಯ ಮೇರೆಗೆ ಕ್ಷೇತ್ರಗಳ ಮೀಸಲಾತಿ ಅವಧಿಯನ್ನು ಐದು ವರ್ಷ ಮಾಡಲಾಗುತ್ತಿದೆ’ ಎಂದರು.</p>.<p>ಕಾಂಗ್ರೆಸ್ನ ಕೆ.ಆರ್.ರಮೇಶ್ ಕುಮಾರ್, ‘ನಮ್ಮ ಸಮಿತಿ ವರದಿ ನೀಡಿದ ಬಳಿಕ ನಮ್ಮದೇ ಸರ್ಕಾರ ಅದನ್ನು ಜಾರಿ ಮಾಡಲಿಲ್ಲ. ರಾಹುಲ್ ಗಾಂಧಿ ಅವರು ಚುನಾವಣಾ ಪ್ರಚಾರಕ್ಕೆ ಬಂದಾಗ ಈ ವಿಷಯವನ್ನು ಗಮನಕ್ಕೆ ತಂದೆ. ಗ್ರಾಮ ಸ್ವರಾಜ್ ಕಾಯ್ದೆ ಜಾರಿಗೊಳಿಸುವುದಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಘೋಷಿಸಿದರು. ಆ ಬಳಿಕ ಸಚಿವ ಸಂಪುಟ ಕಾಯ್ದೆಗೆ ತಿದ್ದುಪಡಿ ತಂದಿತು. ಹೊಸ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿದ ಬಳಿಕವೂ ಹಳೆಯ ಕಾಯ್ದೆಯ ಪ್ರಕಾರವೇ ಚುನಾವಣೆ ನಡೆಸಿತು. ಈಗ ಕಾಯ್ದೆಗೆ ತಿದ್ದುಪಡಿ ತಂದು ಪರಿಶಿಷ್ಟರು, ಹಿಂದುಳಿದವರು ಹಾಗೂ ಮಹಿಳೆಯರಿಗೆ ಅನ್ಯಾಯ ಮಾಡಬೇಡಿ‘ ಎಂದು ಕೋರಿದರು.</p>.<p>‘ಸಲಾತಿಯ ಅವಧಿಯನ್ನು ಕಡಿಮೆ ಮಾಡುವುದು ಅವೈಜ್ಞಾನಿಕ’ ಎಂದು ಬಿಎಸ್ಪಿಯ ಎನ್.ಮಹೇಶ್ ಪ್ರತಿಪಾದಿಸಿದರು. ಜೆಡಿಎಸ್ನ ಎಚ್.ಡಿ.ರೇವಣ್ಣ ಮಸೂದೆ ಬೆಂಬಲಿಸಿ ಮಾತನಾಡಿದರು.</p>.<p>ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಅಧ್ಯಕ್ಷರ ಅವಧಿಯನ್ನು ಐದು ವರ್ಷಕ್ಕೇ ಉಳಿಸಿಕೊಳ್ಳಬೇಕು. ಅಲ್ಲಿ ಉತ್ತಮ ನಾಯಕರು ರೂಪುಗೊಂಡರೆ ಒಳ್ಳೆಯ ಶಾಸಕರು ಬರಲು ಸಾಧ್ಯವಿದೆ‘ ಎಂದು ಅಭಿಪ್ರಾಯಪಟ್ಟರು.</p>.<p><strong>ಏನೇನು ಬದಲಾವಣೆ?</strong><br /><br />*ಪಂಚಾಯಿತಿ ಸದಸ್ಯರ ಕ್ಷೇತ್ರಗಳ ಮೀಸಲಾತಿ ಅವಧಿ 10 ವರ್ಷಗಳಿಂದ 5 ವರ್ಷಕ್ಕೆ ಇಳಿಕೆ</p>.<p>*ಅಧ್ಯಕ್ಷ ಅಥವಾ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವ ಅವಧಿ 30 ತಿಂಗಳಿಂದ 15 ತಿಂಗಳಿಗೆ ಇಳಿಕೆ</p>.<p>*ಪಂಚಾಯಿತಿಗಳ ಮತದಾನಕ್ಕೆ ಎರಡು ದಿನ ಮೊದಲು ಮದ್ಯ ಮಾರಾಟ ಬಂದ್. ಈ ಮೊದಲು ಎಂಟು ದಿನ ಇತ್ತು.</p>.<p>*ಕಾರ್ಖಾನೆಗಳು ಹಾಗೂ ಖಾಲಿ ಭೂಮಿಗಳ ಆಸ್ತಿ ತೆರಿಗೆ ಮರು ಹಂಚಿಕೆ</p>.<p>*ಅವಿಶ್ವಾಸ ಗೊತ್ತುವಳಿ ಮಂಡಿಸುವಾಗ ತಾಲ್ಲೂಕು ಪಂಚಾಯಿತಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿಯಲ್ಲಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ</p>.<p>**<br />ಮೀಸಲಾತಿಯಲ್ಲಿ 10 ಪಂಗಡಗಳಿವೆ. 10 ವರ್ಷ ಮೀಸಲಾತಿ ಇಟ್ಟರೆ ಅವರು ಲಾಭ ಪಡೆಯಲು ಕನಿಷ್ಠ 70 ವರ್ಷ ಕಾಯಬೇಕು. ತಿದ್ದುಪಡಿಯಿಂದ ಸಾಮಾಜಿಕ ನ್ಯಾಯ ಸಿಗಲಿದೆ.<br /><em><strong>-ಕೆ.ಎಸ್.ಈಶ್ವರಪ್ಪ, ಪಂಚಾಯತ್ರಾಜ್ ಸಚಿವ</strong></em></p>.<p>**<br />ಮೀಸಲಾತಿ ಅವಧಿಯನ್ನು ಇಳಿಸಿದರೆ ದಲಿತರು ಹಾಗೂ ಹಿಂದುಳಿದವರು ಬಲಾಢ್ಯರ ಮರ್ಜಿಗೆ ತಕ್ಕಂತೆ ಇರಬೇಕಾಗುತ್ತದೆ. ಅವರಿಗೆ ಅನ್ಯಾಯವಾಗಲಿದೆ.<br />-ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ</p>.<p>**<br />ನಾಲ್ಕೈದು ತಿಂಗಳಿಗೆ ಅಧ್ಯಕ್ಷರನ್ನು ಹುದ್ದೆಯಿಂದ ಇಳಿಸುವ ಪ್ರಕರಣಗಳು ಸಾಕಷ್ಟು ನಡೆಯುತ್ತಿವೆ. ಇದಕ್ಕೆ ಇನ್ನಷ್ಟು ಉತ್ತೇಜನ ನೀಡುವ ಕೆಲಸ ಮಾಡಬೇಡಿ.<br /><em><strong>-ಕೆ.ಆರ್.ರಮೇಶ್ ಕುಮಾರ್, ಕಾಂಗ್ರೆಸ್ ಸದಸ್ಯ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕಾಂಗ್ರೆಸ್ ಸದಸ್ಯರ ತೀವ್ರ ವಿರೋಧದ ಮಧ್ಯೆಯೂ ಪಂಚಾಯಿತಿಗಳ ಅಧ್ಯಕ್ಷ–ಉಪಾಧ್ಯಕ್ಷರ ಅಧಿಕಾರ ಅವಧಿ ಮೊಟಕುಗೊಳಿಸುವ ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ರಾಜ್ (ತಿದ್ದುಪಡಿ) ಮಸೂದೆಗೆ ವಿಧಾನಸಭೆಯಲ್ಲಿ ಸರ್ಕಾರ ಶುಕ್ರವಾರ ಒಪ್ಪಿಗೆ ಪಡೆಯಿತು.</p>.<p>ಕೆ.ಆರ್.ರಮೇಶ್ ಕುಮಾರ್ ಸಮಿತಿಯ ಶಿಫಾರಸಿನ ಆಧಾರದಲ್ಲಿ ಗ್ರಾಮ ಸ್ವರಾಜ್ ಕಾಯ್ದೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಿದ್ದುಪಡಿ ತಂದಿತ್ತು. ಅಧ್ಯಕ್ಷರ ಅವಧಿಯನ್ನು ಐದು ವರ್ಷಕ್ಕೆ ಏರಿಸಲಾಗಿತ್ತು. ಇದೀಗ ತಂದಿರುವ ತಿದ್ದುಪಡಿ ಪ್ರಕಾರ, ಅಧಿಕಾರದ ಅವಧಿ ಎರಡೂವರೆ ವರ್ಷಕ್ಕೆ ಇಳಿಯಲಿದೆ.</p>.<p>ಮಸೂದೆ ಮಂಡಿಸಿದ ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ‘ಹಲವು ಪ್ರಕರಣಗಳಲ್ಲಿ ಹೈಕೋರ್ಟ್ ಆದೇಶ ಹಾಗೂ ಅಡ್ವೊಕೇಟ್ ಜನರಲ್, ಹಣಕಾಸು ಇಲಾಖೆಯ ಸಲಹೆಯ ಮೇರೆಗೆ ಕ್ಷೇತ್ರಗಳ ಮೀಸಲಾತಿ ಅವಧಿಯನ್ನು ಐದು ವರ್ಷ ಮಾಡಲಾಗುತ್ತಿದೆ’ ಎಂದರು.</p>.<p>ಕಾಂಗ್ರೆಸ್ನ ಕೆ.ಆರ್.ರಮೇಶ್ ಕುಮಾರ್, ‘ನಮ್ಮ ಸಮಿತಿ ವರದಿ ನೀಡಿದ ಬಳಿಕ ನಮ್ಮದೇ ಸರ್ಕಾರ ಅದನ್ನು ಜಾರಿ ಮಾಡಲಿಲ್ಲ. ರಾಹುಲ್ ಗಾಂಧಿ ಅವರು ಚುನಾವಣಾ ಪ್ರಚಾರಕ್ಕೆ ಬಂದಾಗ ಈ ವಿಷಯವನ್ನು ಗಮನಕ್ಕೆ ತಂದೆ. ಗ್ರಾಮ ಸ್ವರಾಜ್ ಕಾಯ್ದೆ ಜಾರಿಗೊಳಿಸುವುದಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಘೋಷಿಸಿದರು. ಆ ಬಳಿಕ ಸಚಿವ ಸಂಪುಟ ಕಾಯ್ದೆಗೆ ತಿದ್ದುಪಡಿ ತಂದಿತು. ಹೊಸ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿದ ಬಳಿಕವೂ ಹಳೆಯ ಕಾಯ್ದೆಯ ಪ್ರಕಾರವೇ ಚುನಾವಣೆ ನಡೆಸಿತು. ಈಗ ಕಾಯ್ದೆಗೆ ತಿದ್ದುಪಡಿ ತಂದು ಪರಿಶಿಷ್ಟರು, ಹಿಂದುಳಿದವರು ಹಾಗೂ ಮಹಿಳೆಯರಿಗೆ ಅನ್ಯಾಯ ಮಾಡಬೇಡಿ‘ ಎಂದು ಕೋರಿದರು.</p>.<p>‘ಸಲಾತಿಯ ಅವಧಿಯನ್ನು ಕಡಿಮೆ ಮಾಡುವುದು ಅವೈಜ್ಞಾನಿಕ’ ಎಂದು ಬಿಎಸ್ಪಿಯ ಎನ್.ಮಹೇಶ್ ಪ್ರತಿಪಾದಿಸಿದರು. ಜೆಡಿಎಸ್ನ ಎಚ್.ಡಿ.ರೇವಣ್ಣ ಮಸೂದೆ ಬೆಂಬಲಿಸಿ ಮಾತನಾಡಿದರು.</p>.<p>ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಅಧ್ಯಕ್ಷರ ಅವಧಿಯನ್ನು ಐದು ವರ್ಷಕ್ಕೇ ಉಳಿಸಿಕೊಳ್ಳಬೇಕು. ಅಲ್ಲಿ ಉತ್ತಮ ನಾಯಕರು ರೂಪುಗೊಂಡರೆ ಒಳ್ಳೆಯ ಶಾಸಕರು ಬರಲು ಸಾಧ್ಯವಿದೆ‘ ಎಂದು ಅಭಿಪ್ರಾಯಪಟ್ಟರು.</p>.<p><strong>ಏನೇನು ಬದಲಾವಣೆ?</strong><br /><br />*ಪಂಚಾಯಿತಿ ಸದಸ್ಯರ ಕ್ಷೇತ್ರಗಳ ಮೀಸಲಾತಿ ಅವಧಿ 10 ವರ್ಷಗಳಿಂದ 5 ವರ್ಷಕ್ಕೆ ಇಳಿಕೆ</p>.<p>*ಅಧ್ಯಕ್ಷ ಅಥವಾ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವ ಅವಧಿ 30 ತಿಂಗಳಿಂದ 15 ತಿಂಗಳಿಗೆ ಇಳಿಕೆ</p>.<p>*ಪಂಚಾಯಿತಿಗಳ ಮತದಾನಕ್ಕೆ ಎರಡು ದಿನ ಮೊದಲು ಮದ್ಯ ಮಾರಾಟ ಬಂದ್. ಈ ಮೊದಲು ಎಂಟು ದಿನ ಇತ್ತು.</p>.<p>*ಕಾರ್ಖಾನೆಗಳು ಹಾಗೂ ಖಾಲಿ ಭೂಮಿಗಳ ಆಸ್ತಿ ತೆರಿಗೆ ಮರು ಹಂಚಿಕೆ</p>.<p>*ಅವಿಶ್ವಾಸ ಗೊತ್ತುವಳಿ ಮಂಡಿಸುವಾಗ ತಾಲ್ಲೂಕು ಪಂಚಾಯಿತಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿಯಲ್ಲಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ</p>.<p>**<br />ಮೀಸಲಾತಿಯಲ್ಲಿ 10 ಪಂಗಡಗಳಿವೆ. 10 ವರ್ಷ ಮೀಸಲಾತಿ ಇಟ್ಟರೆ ಅವರು ಲಾಭ ಪಡೆಯಲು ಕನಿಷ್ಠ 70 ವರ್ಷ ಕಾಯಬೇಕು. ತಿದ್ದುಪಡಿಯಿಂದ ಸಾಮಾಜಿಕ ನ್ಯಾಯ ಸಿಗಲಿದೆ.<br /><em><strong>-ಕೆ.ಎಸ್.ಈಶ್ವರಪ್ಪ, ಪಂಚಾಯತ್ರಾಜ್ ಸಚಿವ</strong></em></p>.<p>**<br />ಮೀಸಲಾತಿ ಅವಧಿಯನ್ನು ಇಳಿಸಿದರೆ ದಲಿತರು ಹಾಗೂ ಹಿಂದುಳಿದವರು ಬಲಾಢ್ಯರ ಮರ್ಜಿಗೆ ತಕ್ಕಂತೆ ಇರಬೇಕಾಗುತ್ತದೆ. ಅವರಿಗೆ ಅನ್ಯಾಯವಾಗಲಿದೆ.<br />-ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ</p>.<p>**<br />ನಾಲ್ಕೈದು ತಿಂಗಳಿಗೆ ಅಧ್ಯಕ್ಷರನ್ನು ಹುದ್ದೆಯಿಂದ ಇಳಿಸುವ ಪ್ರಕರಣಗಳು ಸಾಕಷ್ಟು ನಡೆಯುತ್ತಿವೆ. ಇದಕ್ಕೆ ಇನ್ನಷ್ಟು ಉತ್ತೇಜನ ನೀಡುವ ಕೆಲಸ ಮಾಡಬೇಡಿ.<br /><em><strong>-ಕೆ.ಆರ್.ರಮೇಶ್ ಕುಮಾರ್, ಕಾಂಗ್ರೆಸ್ ಸದಸ್ಯ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>