<p><strong>ಬೆಂಗಳೂರು: </strong>ಬೈಕ್ ಅಪಘಾತ ಸಂದರ್ಭದಲ್ಲಿ ಅದರಲ್ಲಿ ಮೂವರು ಸವಾರಿ ಮಾಡುತ್ತಿದ್ದರೆ, ಮೂರನೇ ಸವಾರನಿಗೂ ಪರಿಹಾರ ನೀಡಬೇಕು ಎಂದು ವಿಮಾ ಕಂಪನಿಗೆ ಹೈಕೋರ್ಟ್ ಆದೇಶಿಸಿದೆ.</p>.<p>2011ರಲ್ಲಿ ಕಲಬುರ್ಗಿಯಲ್ಲಿ ನಡೆದಿದ್ದ ಅಪಘಾತ ಪ್ರಕರಣದಲ್ಲಿ ಮೂರನೇ ಸವಾರರಿಗೂ ವಿಮೆ ನೀಡಬೇಕು ಎಂದುಮೋಟಾರು ವಾಹನ ನ್ಯಾಯಮಂಡಳಿ 2012ರಲ್ಲಿ ನೀಡಿದ್ದ ಆದೇಶವನ್ನು ವಿಮಾ ಕಂಪನಿ ಪ್ರಶ್ನಿಸಿತ್ತು. ಮೂರನೇ ಸವಾರನ ಕುಟುಂಬಕ್ಕೆ ₹8.10 ಲಕ್ಷ ಪರಿಹಾರ ನೀಡಲು ತಿಳಿಸಿತ್ತು.</p>.<p>‘ಬೈಕ್ನಲ್ಲಿ ಮೂವರು ಪ್ರಯಾಣಿಸುವ ಮೂಲಕ ವಿಮಾ ಷರತ್ತು ಉಲ್ಲಂಘಿಸಲಾಗಿದೆ. ಬೈಕ್ ಸವಾರ ಸರಿಯಾದ ಚಾಲನಾ ಪರವಾನಗಿಯನ್ನೂ ಹೊಂದಿಲ್ಲ’ ಎಂದು ಕಂಪನಿ ಆರೋಪಿಸಿತ್ತು.</p>.<p>ಮೊಹಮದ್ ಸಿದ್ದೀಕ್ ಮತ್ತು ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಡುವಿನ ಪ್ರಕರಣದಲ್ಲಿ ‘ಮೂವರು ಪ್ರಯಾಣ ಮಾಡುತ್ತಿದ್ದರೂ ವಿಮಾ ಪಡೆಯಬಹುದು’ ಎಂಬ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಹಕ್ಕುದಾರರು ಉಲ್ಲೇಖಿಸಿದ್ದರು.</p>.<p>ವಿಮಾ ಕಂಪನಿ ಮನವಿ ತಿರಸ್ಕರಿಸಿದ ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ಅವರಿದ್ದ ಪೀಠ, ‘ಬೈಕ್ನಲ್ಲಿ ಪ್ರಯಾಣ ಮಾಡುತ್ತಿದ್ದ ಮೂವರು ವ್ಯಕ್ತಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಹೇಳಲು ಆಗುವುದಿಲ್ಲ. ಆದ್ದರಿಂದ ವಿಮೆ ಪಡೆಯುವ ಹಕ್ಕು ನಿರಾಕರಿಸಲು ಆಗುವುದಿಲ್ಲ’ ಎಂದು ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೈಕ್ ಅಪಘಾತ ಸಂದರ್ಭದಲ್ಲಿ ಅದರಲ್ಲಿ ಮೂವರು ಸವಾರಿ ಮಾಡುತ್ತಿದ್ದರೆ, ಮೂರನೇ ಸವಾರನಿಗೂ ಪರಿಹಾರ ನೀಡಬೇಕು ಎಂದು ವಿಮಾ ಕಂಪನಿಗೆ ಹೈಕೋರ್ಟ್ ಆದೇಶಿಸಿದೆ.</p>.<p>2011ರಲ್ಲಿ ಕಲಬುರ್ಗಿಯಲ್ಲಿ ನಡೆದಿದ್ದ ಅಪಘಾತ ಪ್ರಕರಣದಲ್ಲಿ ಮೂರನೇ ಸವಾರರಿಗೂ ವಿಮೆ ನೀಡಬೇಕು ಎಂದುಮೋಟಾರು ವಾಹನ ನ್ಯಾಯಮಂಡಳಿ 2012ರಲ್ಲಿ ನೀಡಿದ್ದ ಆದೇಶವನ್ನು ವಿಮಾ ಕಂಪನಿ ಪ್ರಶ್ನಿಸಿತ್ತು. ಮೂರನೇ ಸವಾರನ ಕುಟುಂಬಕ್ಕೆ ₹8.10 ಲಕ್ಷ ಪರಿಹಾರ ನೀಡಲು ತಿಳಿಸಿತ್ತು.</p>.<p>‘ಬೈಕ್ನಲ್ಲಿ ಮೂವರು ಪ್ರಯಾಣಿಸುವ ಮೂಲಕ ವಿಮಾ ಷರತ್ತು ಉಲ್ಲಂಘಿಸಲಾಗಿದೆ. ಬೈಕ್ ಸವಾರ ಸರಿಯಾದ ಚಾಲನಾ ಪರವಾನಗಿಯನ್ನೂ ಹೊಂದಿಲ್ಲ’ ಎಂದು ಕಂಪನಿ ಆರೋಪಿಸಿತ್ತು.</p>.<p>ಮೊಹಮದ್ ಸಿದ್ದೀಕ್ ಮತ್ತು ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಡುವಿನ ಪ್ರಕರಣದಲ್ಲಿ ‘ಮೂವರು ಪ್ರಯಾಣ ಮಾಡುತ್ತಿದ್ದರೂ ವಿಮಾ ಪಡೆಯಬಹುದು’ ಎಂಬ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಹಕ್ಕುದಾರರು ಉಲ್ಲೇಖಿಸಿದ್ದರು.</p>.<p>ವಿಮಾ ಕಂಪನಿ ಮನವಿ ತಿರಸ್ಕರಿಸಿದ ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ಅವರಿದ್ದ ಪೀಠ, ‘ಬೈಕ್ನಲ್ಲಿ ಪ್ರಯಾಣ ಮಾಡುತ್ತಿದ್ದ ಮೂವರು ವ್ಯಕ್ತಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಹೇಳಲು ಆಗುವುದಿಲ್ಲ. ಆದ್ದರಿಂದ ವಿಮೆ ಪಡೆಯುವ ಹಕ್ಕು ನಿರಾಕರಿಸಲು ಆಗುವುದಿಲ್ಲ’ ಎಂದು ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>