ದೇಶದ ವಿವಿಧ ಪ್ರದೇಶಗಳನ್ನು ಹಾದು ಬಂದಿರುವ ಈ ಜ್ಯೋತಿಯನ್ನು ಮದ್ರಾಸ್ ಎಂಜಿನಿಯರ್ ಗ್ರೂಪ್ ಆ್ಯಂಡ್ ಸೆಂಟರ್ನ (ಎಂಇಜಿ) ಯೋಧರು ಆದರದಿಂದ ಬರಮಾಡಿಕೊಂಡರು. ಬಳಿಕ ಅದನ್ನು ಹಳೆಯ ಮದ್ರಾಸ್ ರಸ್ತೆಯ ಮೂಲಕ ಎಂಇಜಿ ಕೇಂದ್ರಕ್ಕೆ ಒಯ್ಯಲಾಯಿತು. ಕರ್ನಾಟಕ ಮತ್ತು ಕೇರಳ ಉಪವಲಯದ ಜನರಲ್ ಆಫೀಸರ್ ಕಮಾಂಡಿಂಗ್ ಆಗಿರುವ ಮೇಜರ್ ಜನರಲ್ ಜೆ.ವಿ.ಪ್ರಸಾದ್ ಜ್ಯೋತಿಯನ್ನು ಸ್ವೀಕರಿಸಿದರು. ಈ ವೇಳೆ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಲಾಯಿತು.