<p><strong>ಹುಬ್ಬಳ್ಳಿ:</strong> ‘ಕಾವೇರಿ ನದಿಯಿಂದ ತಮಿಳುನಾಡಿಗೆ ಬಿಡಬೇಕಾದ ನೀರಿನ ಪ್ರಮಾಣದಲ್ಲಿ ಪ್ರಸ್ತುತ ವರ್ಷ 27.987 ಟಿಎಂಸಿ ಅಡಿ ನೀರು ಕಡಿಮೆಯಾಗಿದೆ. ಜಲಾಶಯಗಳಲ್ಲಿನ ನೀರು ಎಷ್ಟಿದೆ ಎಂಬುದನ್ನು ಆಧರಿಸಿ ನೀರು ಹರಿಸಲಾಗುವುದು’ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.</p>.<p>ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆ ಅನುಷ್ಠಾನ ಮಾಡುತ್ತಿದ್ದೇವೆಯೇ ಹೊರತು ಕೃಷಿ ಉದ್ದೇಶಕ್ಕಾಗಿ ಅಲ್ಲ. ತಮಿಳುನಾಡು ಈ ಯೋಜನೆಗೆ ವಿನಾ ಕಾರಣ ಅಡ್ಡಿಪಡಿಸುತ್ತಿದೆ’ ಎಂದು ಆರೋಪಿಸಿದರು.</p>.<p>‘ಮೇಕೆದಾಟು ಯೋಜನೆಗೆ ನಮ್ಮ ರಾಜ್ಯದ ಪಾಲು ಮಾತ್ರ ಬಳಸಿಕೊಳ್ಳುತ್ತಿದ್ದೇವೆ. ಈ ಕುರಿತು ಎರಡೂ ರಾಜ್ಯಗಳು ಸುಪ್ರೀಂ ಕೋರ್ಟ್ಲ್ಲಿ ಪಿಐಎಲ್ ಹಾಕಿವೆ. ನಮ್ಮ ಕಾನೂನು ತಜ್ಞರ ತಂಡ ವಾದ ಮಂಡಿಸಿ, ಶೀಘ್ರ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳಲಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಕಾವೇರಿ ನದಿಯಿಂದ ತಮಿಳುನಾಡಿಗೆ ಬಿಡಬೇಕಾದ ನೀರಿನ ಪ್ರಮಾಣದಲ್ಲಿ ಪ್ರಸ್ತುತ ವರ್ಷ 27.987 ಟಿಎಂಸಿ ಅಡಿ ನೀರು ಕಡಿಮೆಯಾಗಿದೆ. ಜಲಾಶಯಗಳಲ್ಲಿನ ನೀರು ಎಷ್ಟಿದೆ ಎಂಬುದನ್ನು ಆಧರಿಸಿ ನೀರು ಹರಿಸಲಾಗುವುದು’ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.</p>.<p>ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆ ಅನುಷ್ಠಾನ ಮಾಡುತ್ತಿದ್ದೇವೆಯೇ ಹೊರತು ಕೃಷಿ ಉದ್ದೇಶಕ್ಕಾಗಿ ಅಲ್ಲ. ತಮಿಳುನಾಡು ಈ ಯೋಜನೆಗೆ ವಿನಾ ಕಾರಣ ಅಡ್ಡಿಪಡಿಸುತ್ತಿದೆ’ ಎಂದು ಆರೋಪಿಸಿದರು.</p>.<p>‘ಮೇಕೆದಾಟು ಯೋಜನೆಗೆ ನಮ್ಮ ರಾಜ್ಯದ ಪಾಲು ಮಾತ್ರ ಬಳಸಿಕೊಳ್ಳುತ್ತಿದ್ದೇವೆ. ಈ ಕುರಿತು ಎರಡೂ ರಾಜ್ಯಗಳು ಸುಪ್ರೀಂ ಕೋರ್ಟ್ಲ್ಲಿ ಪಿಐಎಲ್ ಹಾಕಿವೆ. ನಮ್ಮ ಕಾನೂನು ತಜ್ಞರ ತಂಡ ವಾದ ಮಂಡಿಸಿ, ಶೀಘ್ರ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳಲಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>