'ಮುಖ್ಯಮಂತ್ರಿ ಬದಲಾವಣೆಯಲ್ಲ, ರಾಜ್ಯವನ್ನೇ ಬಿಜೆಪಿ ಬಿಟ್ಟು ತೊಲಗಬೇಕು. ಅವರಿಂದ ರಾಜ್ಯದ ಹಿತ ಕಾಪಾಡಲು ಸಾಧ್ಯವಿಲ್ಲ. ಪ್ರತಿಯೊಂದು ಕ್ಷೇತ್ರದಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ವರ್ಗಾವಣೆಯಲ್ಲಂತೂ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ' ಎಂದ ಅವರು, 'ಹೆತ್ತವರಿಗೆ ಹೆಗ್ಗಣ ಮುದ್ದು ಅನ್ನೋ ಹಾಗೆ ಬಿಜೆಪಿ ರಾಷ್ಟೀಯ ಘಟಕದ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಯಡಿಯೂರಪ್ಪ ಅವರನ್ನು ಹೊಗಳಿದ್ದಾರೆ' ಎಂದು ವ್ಯಂಗ್ಯವಾಡಿದರು.