<p><strong>ಬೆಂಗಳೂರು: </strong>‘ಮಕ್ಕಳ ಪರಿಣಾಮಕಾರಿ ಕಲಿಕೆಗೆ ಆನ್ಲೈನ್ ತರಗತಿಗಳು ತೊಡಕಾಗಿವೆ. ಹೀಗಾಗಿ ಭೌತಿಕ ತರಗತಿಗಳಿಗೆ ಒತ್ತು ನೀಡಲಾಗುತ್ತಿದ್ದು, ಶಾಲೆಗಳನ್ನು ಬಂದ್ ಮಾಡುವ ಆಲೋಚನೆ ಸದ್ಯಕ್ಕಂತೂ ಇಲ್ಲ’ ಎಂದು ಸಚಿವ ಬಿ.ಸಿ.ನಾಗೇಶ್ ಪ್ರತಿಪಾದಿಸಿದರು.</p>.<p>‘ಸರ್ಕಾರಿ ಶಾಲೆಗಳಿಗೆ ದಾಖಲಾಗುವವರಲ್ಲಿ ಬಡವರೇ ಹೆಚ್ಚಿರುತ್ತಾರೆ. ಆನ್ಲೈನ್ ತರಗತಿಗೆ ಅಗತ್ಯವಿರುವ ಸಾಧನ ಹಾಗೂ ಇಂಟರ್ನೆಟ್ ಸಂಪರ್ಕ ಕಲ್ಪಿಸಿಕೊಳ್ಳುವ ಸಾಮರ್ಥ್ಯ ಅವರಿಗೆ ಇರುವುದಿಲ್ಲ. ಆ ಮಕ್ಕಳ ಭವಿಷ್ಯವನ್ನೂ ಗಮನದಲ್ಲಿಟ್ಟುಕೊಳ್ಳಬೇಕು’ ಎಂದರು.</p>.<p>‘ಯಾವುದೇ ಕಾರಣಕ್ಕೂ ಶಾಲೆಗಳು ಬಂದ್ ಆಗಬಾರದು. ಮಕ್ಕಳ ಕಲಿಕೆಗೆ ತೊಡಕಾಗಬಾರದು. ಹೀಗಾಗಿ ಬಿಗಿಕ್ರಮ ಕೈಗೊಳ್ಳಲಾಗುತ್ತದೆ. ಹಿಂದಿನ ಎರಡು ದಿನಗಳಲ್ಲಿ ವಸತಿ ಶಾಲೆ ಸೇರಿ ರಾಜ್ಯದ ಯಾವ ಶಾಲೆಯ ಮಕ್ಕಳಿಗೂ ಸೋಂಕು ತಗುಲಿಲ್ಲ. ಹೀಗಾಗಿ ಪೋಷಕರು ಧೈರ್ಯದಿಂದ ಇರಬೇಕು’ ಎಂದು ತಿಳಿಸಿದರು.</p>.<p><strong>2 ದಿನಗಳಲ್ಲಿ ಶಾಲೆ–ಕಾಲೇಜಿಗೆ ಪ್ರತ್ಯೇಕ ಮಾರ್ಗಸೂಚಿ</strong></p>.<p>ರಾಜ್ಯದಲ್ಲಿರುವ ಶಾಲೆ ಹಾಗೂ ಕಾಲೇಜುಗಳಲ್ಲಿ ಕೋವಿಡ್ ಹರಡುವಿಕೆ ತಡೆಯುವ ಉದ್ದೇಶದಿಂದ ಮುಂದಿನ ಎರಡು ದಿನಗಳಲ್ಲಿ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುವ ಸಾಧ್ಯತೆ ಇದೆ.</p>.<p>‘ಶಾಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುವಂತೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದೇನೆ. ಇದೇ 9ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಜ್ಞರ ಜೊತೆ ಸಭೆ ನಡೆಸಲಿದ್ದಾರೆ. ಅಲ್ಲಿ ಈ ಬಗ್ಗೆ ವಿಶೇಷವಾಗಿ ಚರ್ಚಿಸಲಾಗುತ್ತದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಂಗಳವಾರ ಹೇಳಿದ್ದಾರೆ.</p>.<p>‘ಸಚಿವರು ಬರೆದಿರುವ ಪತ್ರ ಕೈಸೇರಿದೆ. ಅದನ್ನು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮುಂದೆ ಇಡಲಾಗುತ್ತದೆ. ಹೊಸ ಮಾರ್ಗಸೂಚಿ ಸಿದ್ಧಪಡಿಸಿ ಮುಂದಿನ ಎರಡು ದಿನಗಳಲ್ಲಿ ಅದನ್ನು ಬಿಡುಗಡೆ ಮಾಡಲಾಗುತ್ತದೆ’ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್, ‘ಎಲ್ಲಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹೀಗಿದ್ದರೂ ವಿದ್ಯಾರ್ಥಿಗಳಿಗೆ ಸೋಂಕು ತಗುಲುತ್ತಿರುವುದು ಶಾಲೆ ಹಾಗೂ ಕಾಲೇಜು ಆಡಳಿತ ಮಂಡಳಿಗಳನ್ನು ಚಿಂತೆಗೀಡು ಮಾಡಿದೆ’ ಎಂದಿದ್ದಾರೆ.</p>.<p>ಪಿಯು ಕಾಲೇಜುಗಳಲ್ಲಿ 27 ಪ್ರಕರಣ: ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಹಿಂದಿನ 10 ದಿನಗಳಲ್ಲಿ 27 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 21 ಮಂದಿ ವಿದ್ಯಾರ್ಥಿಗಳು ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಮಕ್ಕಳ ಪರಿಣಾಮಕಾರಿ ಕಲಿಕೆಗೆ ಆನ್ಲೈನ್ ತರಗತಿಗಳು ತೊಡಕಾಗಿವೆ. ಹೀಗಾಗಿ ಭೌತಿಕ ತರಗತಿಗಳಿಗೆ ಒತ್ತು ನೀಡಲಾಗುತ್ತಿದ್ದು, ಶಾಲೆಗಳನ್ನು ಬಂದ್ ಮಾಡುವ ಆಲೋಚನೆ ಸದ್ಯಕ್ಕಂತೂ ಇಲ್ಲ’ ಎಂದು ಸಚಿವ ಬಿ.ಸಿ.ನಾಗೇಶ್ ಪ್ರತಿಪಾದಿಸಿದರು.</p>.<p>‘ಸರ್ಕಾರಿ ಶಾಲೆಗಳಿಗೆ ದಾಖಲಾಗುವವರಲ್ಲಿ ಬಡವರೇ ಹೆಚ್ಚಿರುತ್ತಾರೆ. ಆನ್ಲೈನ್ ತರಗತಿಗೆ ಅಗತ್ಯವಿರುವ ಸಾಧನ ಹಾಗೂ ಇಂಟರ್ನೆಟ್ ಸಂಪರ್ಕ ಕಲ್ಪಿಸಿಕೊಳ್ಳುವ ಸಾಮರ್ಥ್ಯ ಅವರಿಗೆ ಇರುವುದಿಲ್ಲ. ಆ ಮಕ್ಕಳ ಭವಿಷ್ಯವನ್ನೂ ಗಮನದಲ್ಲಿಟ್ಟುಕೊಳ್ಳಬೇಕು’ ಎಂದರು.</p>.<p>‘ಯಾವುದೇ ಕಾರಣಕ್ಕೂ ಶಾಲೆಗಳು ಬಂದ್ ಆಗಬಾರದು. ಮಕ್ಕಳ ಕಲಿಕೆಗೆ ತೊಡಕಾಗಬಾರದು. ಹೀಗಾಗಿ ಬಿಗಿಕ್ರಮ ಕೈಗೊಳ್ಳಲಾಗುತ್ತದೆ. ಹಿಂದಿನ ಎರಡು ದಿನಗಳಲ್ಲಿ ವಸತಿ ಶಾಲೆ ಸೇರಿ ರಾಜ್ಯದ ಯಾವ ಶಾಲೆಯ ಮಕ್ಕಳಿಗೂ ಸೋಂಕು ತಗುಲಿಲ್ಲ. ಹೀಗಾಗಿ ಪೋಷಕರು ಧೈರ್ಯದಿಂದ ಇರಬೇಕು’ ಎಂದು ತಿಳಿಸಿದರು.</p>.<p><strong>2 ದಿನಗಳಲ್ಲಿ ಶಾಲೆ–ಕಾಲೇಜಿಗೆ ಪ್ರತ್ಯೇಕ ಮಾರ್ಗಸೂಚಿ</strong></p>.<p>ರಾಜ್ಯದಲ್ಲಿರುವ ಶಾಲೆ ಹಾಗೂ ಕಾಲೇಜುಗಳಲ್ಲಿ ಕೋವಿಡ್ ಹರಡುವಿಕೆ ತಡೆಯುವ ಉದ್ದೇಶದಿಂದ ಮುಂದಿನ ಎರಡು ದಿನಗಳಲ್ಲಿ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುವ ಸಾಧ್ಯತೆ ಇದೆ.</p>.<p>‘ಶಾಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುವಂತೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದೇನೆ. ಇದೇ 9ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಜ್ಞರ ಜೊತೆ ಸಭೆ ನಡೆಸಲಿದ್ದಾರೆ. ಅಲ್ಲಿ ಈ ಬಗ್ಗೆ ವಿಶೇಷವಾಗಿ ಚರ್ಚಿಸಲಾಗುತ್ತದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಂಗಳವಾರ ಹೇಳಿದ್ದಾರೆ.</p>.<p>‘ಸಚಿವರು ಬರೆದಿರುವ ಪತ್ರ ಕೈಸೇರಿದೆ. ಅದನ್ನು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮುಂದೆ ಇಡಲಾಗುತ್ತದೆ. ಹೊಸ ಮಾರ್ಗಸೂಚಿ ಸಿದ್ಧಪಡಿಸಿ ಮುಂದಿನ ಎರಡು ದಿನಗಳಲ್ಲಿ ಅದನ್ನು ಬಿಡುಗಡೆ ಮಾಡಲಾಗುತ್ತದೆ’ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್, ‘ಎಲ್ಲಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹೀಗಿದ್ದರೂ ವಿದ್ಯಾರ್ಥಿಗಳಿಗೆ ಸೋಂಕು ತಗುಲುತ್ತಿರುವುದು ಶಾಲೆ ಹಾಗೂ ಕಾಲೇಜು ಆಡಳಿತ ಮಂಡಳಿಗಳನ್ನು ಚಿಂತೆಗೀಡು ಮಾಡಿದೆ’ ಎಂದಿದ್ದಾರೆ.</p>.<p>ಪಿಯು ಕಾಲೇಜುಗಳಲ್ಲಿ 27 ಪ್ರಕರಣ: ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಹಿಂದಿನ 10 ದಿನಗಳಲ್ಲಿ 27 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 21 ಮಂದಿ ವಿದ್ಯಾರ್ಥಿಗಳು ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>