‘ಮಕ್ಕಳಲ್ಲಿ ಬರವಣಿಗೆ ಕೌಶಲ ಮತ್ತು ಜ್ಞಾನಮಟ್ಟ ಬೆಳೆಯುವುದು ಮುಖ್ಯ. ಬಹು ಆಯ್ಕೆ ಪ್ರಶ್ನೆಗಳಿಂದ ವಿದ್ಯಾರ್ಥಿಗಳು ಬರೆಯುವುದನ್ನು ಮರೆಯುತ್ತಾರೆ. ವಿದ್ಯಾರ್ಥಿಗಳು ವಿಷಯದ ವಿಶ್ಲೇಷಣೆ ನಡೆಸಿ ಬರೆಯುವುದು ಮುಖ್ಯವಾಗಬೇಕು’ ಎಂದು ಕರ್ನಾಟಕ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಕೆ. ಮಂಜುನಾಥ್ ಅಭಿಪ್ರಾಯಪಟ್ಟಿದ್ದಾರೆ.