<p><strong>ಬೆಂಗಳೂರು:</strong> ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ವಿಧಾನಸಭಾ ಚುನಾವಣೆ ಎದುರಿಸುವ ಕುರಿತು ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯಿಂದ ಪಕ್ಷದಲ್ಲಿ ಯಾರಿಗೂ ಅಸಮಾಧಾನ ಆಗಿಲ್ಲ’ ಎಂದು ಬಿಜೆಪಿಯ ರಾಜ್ಯ ಉಸ್ತುವಾರಿ ವಹಿಸಿರುವ ಅರುಣ್ ಸಿಂಗ್ ಹೇಳಿದ್ದಾರೆ.</p>.<p>ನವದೆಹಲಿಯಲ್ಲಿ ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ಬೊಮ್ಮಾಯಿ ನಾಯಕತ್ವಕ್ಕೆ ಯಾರಾದರೂ ಏಕೆ ಅಸಮಾಧಾನಗೊಳ್ಳಬೇಕು? ಅವರು ಈಗ ಮುಖ್ಯಮಂತ್ರಿ ಆಗಿದ್ದಾರೆ. ಅವರ ನೇತೃತ್ವದಲ್ಲೇ 2023 ರ ಚುನಾವಣೆಯನ್ನು ಎದುರಿಸಲಿದ್ದೇವೆ’ ಎಂದರು.</p>.<p>‘ಬೊಮ್ಮಾಯಿ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸುವುದಾಗಿ ಅಮಿತ್ ಶಾ ಅವರು ಸ್ಪಷ್ಟಪಡಿಸಿದ್ದಾರೆ. ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪಕ್ಷದ ಸಂಘಟನೆ ಬಲಪಡಿಸುತ್ತಾರೆ. ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಾರೆ’ ಎಂದು ಅವರು ಹೇಳಿದರು.</p>.<p>‘ಬೊಮ್ಮಾಯಿ ಮತ್ತು ಕಟೀಲ್ ನಾಯಕತ್ವದಲ್ಲಿ ಪಕ್ಷ ಇತ್ತೀಚಿನ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಿಜಯದ ಯಾತ್ರೆ ನಡೆಸಿದೆ. 2023 ರ ವಿಧಾನಸಭಾ ಚುನಾವಣೆಯಲ್ಲೂ ಭರ್ಜರಿ ವಿಜಯ ಸಾಧಿಸಿ, ರಾಜ್ಯದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲಿದೆ’ ಎಂದು ಅರುಣ್ ಸಿಂಗ್ ತಿಳಿಸಿದರು.</p>.<p class="Subhead">ಸಿಂಗ್ ಭೇಟಿಯಾದ ಶೆಟ್ಟರ್: ಶಾಸಕ ಜಗದೀಶ್ ಶೆಟ್ಟರ್ ಅವರು ಅರುಣ್ ಸಿಂಗ್ ಅವರನ್ನು ಬೆಳಿಗ್ಗೆ ಭೇಟಿ ಮಾಡಿ ಚರ್ಚಿಸಿದರು.</p>.<p>‘ಇದೊಂದು ಸೌಜನ್ಯದ ಭೇಟಿಯಾಗಿತ್ತು. ಈಚೆಗೆ ಮುಗಿದ ಮಹಾನಗರ ಪಾಲಿಕೆ ಚುನಾವಣೆಗಳ ಬಗ್ಗೆ ಚರ್ಚಿಸಲಾಯಿತು. ರಾಜಕೀಯದ ವಿಚಾರ ಚರ್ಚಿಸಲಿಲ್ಲ’ ಎಂದು ಶೆಟ್ಟರ್ ಅವರು ಸುದ್ದಿಗಾರರಿಗೆ ಹೇಳಿದರು.</p>.<p>ಶೆಟ್ಟರ್ ಅವರು ಪ್ರಲ್ಹಾದ ಜೋಶಿಯವರ ಮಗಳ ಮದುವೆಯ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಗೆ ಬಂದಿದ್ದರು.</p>.<p>ದಾವಣಗೆರೆಯಲ್ಲಿ ಅಮಿತ್ ಶಾ ಅವರು ಬೊಮ್ಮಾಯಿ ಆಡಳಿತವನ್ನು ಶ್ಲಾಘಿಸಿ, ಚುನಾವಣೆಯ ನೇತೃತ್ವದ ಬಗ್ಗೆ ಹೇಳಿಕೆ ನೀಡಿದ ಬಳಿಕ ಶೆಟ್ಟರ್ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಹೇಳಿಕೆ ಬಗ್ಗೆ ಚರ್ಚಿಸಿದ್ದರು.</p>.<p><strong>ಸಂತೋಷ್ ಭೇಟಿ ಮಾಡಿದ ಬೊಮ್ಮಾಯಿ</strong></p>.<p>ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವದೆಹಲಿಯಲ್ಲಿ ಮಂಗಳವಾರ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕಾರಣದ ಕುರಿತು ಚರ್ಚೆ ನಡೆಸಿದರು.</p>.<p>ಸುಮಾರು 40 ನಿಮಿಷಗಳ ಕಾಲದ ಮಾತುಕತೆಯ ಸಂದರ್ಭದಲ್ಲಿ ಬೊಮ್ಮಾಯಿ ಜತೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇದ್ದರು.</p>.<p>ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ, ಇತ್ತೀಚಿಗೆ ಮುಗಿದ ಮಹಾನಗರ ಪಾಲಿಕೆಗಳ ಚುನಾವಣೆ ಫಲಿತಾಂಶ ಮತ್ತು ಪಕ್ಷದ ಸಂಘಟನೆ ಬಲಪಡಿಸುವ ಕುರಿತು ಚರ್ಚಿಸಲಾಯಿತು ಎಂದರು.</p>.<p>‘ಸಂಪುಟದಲ್ಲಿ ಖಾಲಿ ಉಳಿದಿರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಚರ್ಚೆ ನಡೆಯಲಿಲ್ಲ’ ಎಂದೂ ಬೊಮ್ಮಾಯಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ವಿಧಾನಸಭಾ ಚುನಾವಣೆ ಎದುರಿಸುವ ಕುರಿತು ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯಿಂದ ಪಕ್ಷದಲ್ಲಿ ಯಾರಿಗೂ ಅಸಮಾಧಾನ ಆಗಿಲ್ಲ’ ಎಂದು ಬಿಜೆಪಿಯ ರಾಜ್ಯ ಉಸ್ತುವಾರಿ ವಹಿಸಿರುವ ಅರುಣ್ ಸಿಂಗ್ ಹೇಳಿದ್ದಾರೆ.</p>.<p>ನವದೆಹಲಿಯಲ್ಲಿ ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ಬೊಮ್ಮಾಯಿ ನಾಯಕತ್ವಕ್ಕೆ ಯಾರಾದರೂ ಏಕೆ ಅಸಮಾಧಾನಗೊಳ್ಳಬೇಕು? ಅವರು ಈಗ ಮುಖ್ಯಮಂತ್ರಿ ಆಗಿದ್ದಾರೆ. ಅವರ ನೇತೃತ್ವದಲ್ಲೇ 2023 ರ ಚುನಾವಣೆಯನ್ನು ಎದುರಿಸಲಿದ್ದೇವೆ’ ಎಂದರು.</p>.<p>‘ಬೊಮ್ಮಾಯಿ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸುವುದಾಗಿ ಅಮಿತ್ ಶಾ ಅವರು ಸ್ಪಷ್ಟಪಡಿಸಿದ್ದಾರೆ. ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪಕ್ಷದ ಸಂಘಟನೆ ಬಲಪಡಿಸುತ್ತಾರೆ. ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಾರೆ’ ಎಂದು ಅವರು ಹೇಳಿದರು.</p>.<p>‘ಬೊಮ್ಮಾಯಿ ಮತ್ತು ಕಟೀಲ್ ನಾಯಕತ್ವದಲ್ಲಿ ಪಕ್ಷ ಇತ್ತೀಚಿನ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಿಜಯದ ಯಾತ್ರೆ ನಡೆಸಿದೆ. 2023 ರ ವಿಧಾನಸಭಾ ಚುನಾವಣೆಯಲ್ಲೂ ಭರ್ಜರಿ ವಿಜಯ ಸಾಧಿಸಿ, ರಾಜ್ಯದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲಿದೆ’ ಎಂದು ಅರುಣ್ ಸಿಂಗ್ ತಿಳಿಸಿದರು.</p>.<p class="Subhead">ಸಿಂಗ್ ಭೇಟಿಯಾದ ಶೆಟ್ಟರ್: ಶಾಸಕ ಜಗದೀಶ್ ಶೆಟ್ಟರ್ ಅವರು ಅರುಣ್ ಸಿಂಗ್ ಅವರನ್ನು ಬೆಳಿಗ್ಗೆ ಭೇಟಿ ಮಾಡಿ ಚರ್ಚಿಸಿದರು.</p>.<p>‘ಇದೊಂದು ಸೌಜನ್ಯದ ಭೇಟಿಯಾಗಿತ್ತು. ಈಚೆಗೆ ಮುಗಿದ ಮಹಾನಗರ ಪಾಲಿಕೆ ಚುನಾವಣೆಗಳ ಬಗ್ಗೆ ಚರ್ಚಿಸಲಾಯಿತು. ರಾಜಕೀಯದ ವಿಚಾರ ಚರ್ಚಿಸಲಿಲ್ಲ’ ಎಂದು ಶೆಟ್ಟರ್ ಅವರು ಸುದ್ದಿಗಾರರಿಗೆ ಹೇಳಿದರು.</p>.<p>ಶೆಟ್ಟರ್ ಅವರು ಪ್ರಲ್ಹಾದ ಜೋಶಿಯವರ ಮಗಳ ಮದುವೆಯ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಗೆ ಬಂದಿದ್ದರು.</p>.<p>ದಾವಣಗೆರೆಯಲ್ಲಿ ಅಮಿತ್ ಶಾ ಅವರು ಬೊಮ್ಮಾಯಿ ಆಡಳಿತವನ್ನು ಶ್ಲಾಘಿಸಿ, ಚುನಾವಣೆಯ ನೇತೃತ್ವದ ಬಗ್ಗೆ ಹೇಳಿಕೆ ನೀಡಿದ ಬಳಿಕ ಶೆಟ್ಟರ್ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಹೇಳಿಕೆ ಬಗ್ಗೆ ಚರ್ಚಿಸಿದ್ದರು.</p>.<p><strong>ಸಂತೋಷ್ ಭೇಟಿ ಮಾಡಿದ ಬೊಮ್ಮಾಯಿ</strong></p>.<p>ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವದೆಹಲಿಯಲ್ಲಿ ಮಂಗಳವಾರ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕಾರಣದ ಕುರಿತು ಚರ್ಚೆ ನಡೆಸಿದರು.</p>.<p>ಸುಮಾರು 40 ನಿಮಿಷಗಳ ಕಾಲದ ಮಾತುಕತೆಯ ಸಂದರ್ಭದಲ್ಲಿ ಬೊಮ್ಮಾಯಿ ಜತೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇದ್ದರು.</p>.<p>ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ, ಇತ್ತೀಚಿಗೆ ಮುಗಿದ ಮಹಾನಗರ ಪಾಲಿಕೆಗಳ ಚುನಾವಣೆ ಫಲಿತಾಂಶ ಮತ್ತು ಪಕ್ಷದ ಸಂಘಟನೆ ಬಲಪಡಿಸುವ ಕುರಿತು ಚರ್ಚಿಸಲಾಯಿತು ಎಂದರು.</p>.<p>‘ಸಂಪುಟದಲ್ಲಿ ಖಾಲಿ ಉಳಿದಿರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಚರ್ಚೆ ನಡೆಯಲಿಲ್ಲ’ ಎಂದೂ ಬೊಮ್ಮಾಯಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>