ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರಿನ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ

Last Updated 27 ಆಗಸ್ಟ್ 2022, 8:32 IST
ಅಕ್ಷರ ಗಾತ್ರ

ರಾಯಚೂರು: ತೆಲಂಗಾಣದೊಂದಿಗೆ ರಾಯಚೂರು ವಿಲೀನ ವಿಷಯ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಯಚೂರಿನ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರರಾವ್ ಹೇಳಿಕೆ ಹಾಸ್ಯಾಸ್ಪದವಾಗಿದೆ. ರಾಯಚೂರು ಜಿಲ್ಲೆ ಈಗಾಗಲೇ ಅಭಿವೃದ್ಧಿಯತ್ತ ಸಾಗಿದೆ. ತೆಲಂಗಾಣವು ಹಿಂದುಳಿದ ಪ್ರದೇಶವೆಂದು ಅವರು ಹೋರಾಟ ಮಾಡಿ, ಈಗ ಮುಖ್ಯಮಂತ್ರಿ ಆಗಿದ್ದಾರೆ. ತೆಲಂಗಾಣ ಅಭಿವೃದ್ಧಿ ಆಗದಿರುವುದನ್ನು ಮರೆಮಾಚಲು ಈ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು.

ರಾಯಚೂರಿನ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ರಾಜಕೀಯ ಪ್ರೇರಿತವಾಗಿ ಅವರು ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT