ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀನಾಮೆ ನೀಡುವ‌ ಪ್ರಶ್ನೆಯೇ ಇಲ್ಲ: ಬಿಎಸ್‌ ಯಡಿಯೂರಪ್ಪ

Last Updated 17 ಜುಲೈ 2021, 5:25 IST
ಅಕ್ಷರ ಗಾತ್ರ

ನವದೆಹಲಿ: 'ನಾನು ರಾಜೀನಾಮೆ ನೀಡಲಿದ್ದೇನೆ ಎಂಬ‌ ಸುದ್ದಿಯಲ್ಲಿ ಸತ್ಯಾಂಶ ಇಲ್ಲ. ರಾಜೀನಾಮೆ ನೀಡುವುದೂ ಇಲ್ಲ' ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಶನಿವಾರ ಬೆಳಿಗ್ಗೆ ಬಿಜೆಪಿ ರಾಷ್ಟ್ರೀಯ ‌ಅಧ್ಯಕ್ಷ‌ ಜೆ.ಪಿ.‌ನಡ್ಡಾ ಅವರ ಭೇಟಿಗೆ ತೆರಳಿದ ಸಂದರ್ಭ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

'ನಾನು ಪ್ರಧಾನಿ ಜೊತೆ‌ ರಾಜ್ಯದ ಅಭಿವೃದ್ಧಿ ಹಾಗೂ ಮೇಕೆದಾಟು ಯೋಜನೆ ಬಗ್ಗೆ ಮಾತುಕತೆ‌ ನಡೆಸಿದ್ದೇನೆ. ಪಕ್ಷದ ವರಿಷ್ಠರಾದ ಅಮಿತ್ ಶಾ, ನಡ್ಡಾ, ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದೇನೆ' ಎಂದು ಅವರು ಹೇಳಿದರು.

'ಆಗಸ್ಟ್ ಮೊದಲ ವಾರ ಮತ್ತೆ ದೆಹಲಿಗೆ ಬಂದು ವರಿಷ್ಠರನ್ನು ಭೇಟಿ ಮಾಡುವೆ' ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT