ವಿಧಾನ ಪರಿಷತ್ನಲ್ಲಿ ಜೆಡಿಎಸ್ನ ಕೆ.ಎ. ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಅವರು, ‘ಶಾಲಾ ಹಂತದಲ್ಲಿ ನೈತಿಕ ಶಿಕ್ಷಣ ಅಳವಡಿಸುವ ಕುರಿತು ಇತ್ತೀಚೆಗೆ ಸರ್ವ ಧರ್ಮಗಳ ಚಿಂತಕರ ದುಂಡು ಮೇಜಿನ ಸಭೆ ನಡೆಸಲಾಗಿತ್ತು. ಅಲ್ಲಿ ಕೆಲವರು ಸಾತ್ವಿಕ ಆಹಾರ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಭಿಪ್ರಾಯ ವ್ಯಕ್ತಪಡಿಸುವುದು ಅವರ ಸ್ವಾತಂತ್ರ್ಯ. ಇದೇ ರೀತಿ ಅಭಿಪ್ರಾಯ ಹೇಳಿ ಎಂದು ಸರ್ಕಾರ ಸೂಚಿಸಲು ಸಾಧ್ಯವಿಲ್ಲ. ಶಾಲಾ ಹಂತದಲ್ಲಿ ನೈತಿಕ ಶಿಕ್ಷಣ ನೀಡಬೇಕು ಎಂದು ಎಲ್ಲರೂ ಸಲಹೆ ನೀಡಿದ್ದಾರೆ’ ಎಂದರು.