ಸಾಹಿತಿ ದೊಡ್ಡರಂಗೇಗೌಡ, ‘ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಬಾಲಗಂಗಾಧರನಾಥ ಸ್ವಾಮೀಜಿ, ತಮ್ಮ ಅಸಾಮಾನ್ಯ ಕಾಯಕಗಳಿಂದ ಮಹಾಪುರುಷರಾದರು. ಭೈರವನ ಭಕ್ತರಿಗಷ್ಟೇ ಸೀಮಿತವಾಗಿದ್ದ ಆದಿಚುಂಚನಗಿರಿ ಕ್ಷೇತ್ರವನ್ನು, ಕೇವಲ ಮೂರುವರೆ ದಶಕದಲ್ಲಿ ಮಹಾಕ್ಷೇತ್ರವನ್ನಾಗಿಸಿದ್ದು ವಿಶೇಷ. ಜ್ಞಾನ ಪ್ರಸಾರದಿಂದ ಸಮಾಜದ ಉನ್ನತಿ ಎಂದು ನಂಬಿ ಮುಂದುವರಿದ ಅವರು, ಈ ಕಾರ್ಯಕ್ಕಾಗಿ ಶಿಕ್ಷಣ ಕ್ಷೇತ್ರವನ್ನು ಆರಿಸಕೊಂಡು, ದೊಡ್ಡ ಕ್ರಾಂತಿಯನ್ನೇ ಮಾಡಿದರು’ ಎಂದು ಹೇಳಿದರು.