‘ಸಂಘದ ಮನವಿ ಪುರಸ್ಕರಿಸಿದ್ದ ಶಿಕ್ಷಣ ಇಲಾಖೆ ಶೇ 40 ರಷ್ಟು ಹುದ್ದೆಗಳನ್ನು ಬಡ್ತಿ ಮೂಲಕ ತುಂಬಿಕೊಳ್ಳಲು ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಕಳುಹಿಸಿತ್ತು. ಆರ್ಥಿಕ ಇಲಾಖೆ ಸಮ್ಮತಿ ನೀಡಿದ್ದು, ಸಂಪುಟ ಸಭೆಯಲ್ಲಿ ಅನುಮತಿ ಪಡೆದು, ಮಾರ್ಚ್ 9 ರಿಂದಲೇ ಬಡ್ತಿ ನೀಡುವ ಪ್ರಕ್ರಿಯೆ ಆರಂಭಿಸುವ ನಿರೀಕ್ಷೆ ಇದೆ. ಇದರಿಂದ ಸುಮಾರು 22 ಸಾವಿರ ಶಿಕ್ಷಕರಿಗೆ ಬಡ್ತಿ ದೊರೆಯಲಿದೆ’ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಮಾಹಿತಿ ನೀಡಿದರು.