<p><strong>ಎಂ.ಕೆ. ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): </strong>ಇಲ್ಲಿನ ಗಾಂಧಿ ನಗರದಲ್ಲಿ ಭಾನುವಾರ ಮೃತರಾದ ವೃದ್ಧರೊಬ್ಬರ ಅಂತಿಮ ಯಾತ್ರೆಗೆ ಸ್ಥಳೀಯರು ಬಾರದಿದ್ದರಿಂದ ಕುಟುಂಬದವರು ಶವವನ್ನು ಬೈಸಿಕಲ್ನಲ್ಲಿ ಮಳೆಯಲ್ಲೇ ಸಾಗಿಸಿದ ಘಟನೆ ನಡೆಯಿತು.</p>.<p>ಕೊರೊನಾ ಸೋಂಕಿನ ಭೀತಿಯಿಂದಾಗಿ ಜನರು ನೆರವಿಗೆ ಬರಲಿಲ್ಲ ಎನ್ನಲಾಗುತ್ತಿದೆ.</p>.<p>ಎರಡು ದಿನಗಳಿಂದ ಜ್ವರದಿಂದ ಬಳಲುತಿದ್ದ ಆ ವ್ಯಕ್ತಿಗೆ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಕೊರೊನಾ ಸೋಂಕಿನ ಲಕ್ಷಣಗಳಿದ್ದು ತಪಾಸಣೆ ಮಾಡಿಸಿಕೊಳ್ಳಿ ಎಂದು ವೈದ್ಯರು ತಿಳಿಸಿದ್ದರಿಂದ ಮನೆಗೆ ವಾಪಸಾಗಿದ್ದ ವೃದ್ಧ ಬೆಳಗಿನ ಜಾವ ಸಾವಿಗೀಡಾಗಿದ್ದಾರೆ.</p>.<p>‘ತಹಶೀಲ್ದಾರ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರೂ ಸ್ಪಂದನೆ ಸಿಗಲಿಲ್ಲ. ಶವ ಸಾಗಿಸಲು ಖಾಸಗಿ ವಾಹನದವರೂ ಬರಲಿಲ್ಲ’ ಎಂದು ಕುಟುಂಬದವರು ಆರೋಪಿಸಿದರು</p>.<p>ಬೈಸಿಕಲ್ ಮೇಲೆ ಶವ ಸಾಗಿಸುತ್ತಿದ ವಿಷಯ ತಿಳಿದ ಪಟ್ಟಣ ಪಂಚಾಯಿತಿ ಸದಸ್ಯ ಪುಟ್ಟಪ್ಪ ಪಟ್ಟಣಶೆಟ್ಟಿ ವಾಹನದ ವ್ಯವಸ್ಥೆ ಮಾಡಿದರು. ಬಳಿಕ ಸ್ಥಳೀಯರು ಕೂಡ ಬಂದು ಅಂತ್ಯಕ್ರಿಯೆಗೆ ನೆರವಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಂ.ಕೆ. ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): </strong>ಇಲ್ಲಿನ ಗಾಂಧಿ ನಗರದಲ್ಲಿ ಭಾನುವಾರ ಮೃತರಾದ ವೃದ್ಧರೊಬ್ಬರ ಅಂತಿಮ ಯಾತ್ರೆಗೆ ಸ್ಥಳೀಯರು ಬಾರದಿದ್ದರಿಂದ ಕುಟುಂಬದವರು ಶವವನ್ನು ಬೈಸಿಕಲ್ನಲ್ಲಿ ಮಳೆಯಲ್ಲೇ ಸಾಗಿಸಿದ ಘಟನೆ ನಡೆಯಿತು.</p>.<p>ಕೊರೊನಾ ಸೋಂಕಿನ ಭೀತಿಯಿಂದಾಗಿ ಜನರು ನೆರವಿಗೆ ಬರಲಿಲ್ಲ ಎನ್ನಲಾಗುತ್ತಿದೆ.</p>.<p>ಎರಡು ದಿನಗಳಿಂದ ಜ್ವರದಿಂದ ಬಳಲುತಿದ್ದ ಆ ವ್ಯಕ್ತಿಗೆ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಕೊರೊನಾ ಸೋಂಕಿನ ಲಕ್ಷಣಗಳಿದ್ದು ತಪಾಸಣೆ ಮಾಡಿಸಿಕೊಳ್ಳಿ ಎಂದು ವೈದ್ಯರು ತಿಳಿಸಿದ್ದರಿಂದ ಮನೆಗೆ ವಾಪಸಾಗಿದ್ದ ವೃದ್ಧ ಬೆಳಗಿನ ಜಾವ ಸಾವಿಗೀಡಾಗಿದ್ದಾರೆ.</p>.<p>‘ತಹಶೀಲ್ದಾರ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರೂ ಸ್ಪಂದನೆ ಸಿಗಲಿಲ್ಲ. ಶವ ಸಾಗಿಸಲು ಖಾಸಗಿ ವಾಹನದವರೂ ಬರಲಿಲ್ಲ’ ಎಂದು ಕುಟುಂಬದವರು ಆರೋಪಿಸಿದರು</p>.<p>ಬೈಸಿಕಲ್ ಮೇಲೆ ಶವ ಸಾಗಿಸುತ್ತಿದ ವಿಷಯ ತಿಳಿದ ಪಟ್ಟಣ ಪಂಚಾಯಿತಿ ಸದಸ್ಯ ಪುಟ್ಟಪ್ಪ ಪಟ್ಟಣಶೆಟ್ಟಿ ವಾಹನದ ವ್ಯವಸ್ಥೆ ಮಾಡಿದರು. ಬಳಿಕ ಸ್ಥಳೀಯರು ಕೂಡ ಬಂದು ಅಂತ್ಯಕ್ರಿಯೆಗೆ ನೆರವಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>