<p>ಬೆಂಗಳೂರು: ‘ನಾ ನಾಯಕಿ ಕಾರ್ಯಕ್ರಮದಲ್ಲಿ ವೇದಿಕೆ ಹತ್ತಲು ಹೋದಾಗ ‘ನಿಮಗೆ ವೇದಿಕೆ ಹತ್ತಲು ಅನುಮತಿ ನೀಡಿಲ್ಲ ನಡೆಯಿರಿ’ ಎಂದು ಪೊಲೀಸರು ಕೈ ಹಿಡಿದು ಕೆಳಗೆ ಎಳೆದೊಯ್ದರು’ ಎಂದು ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ನಾಯಕಿ ನಫೀಸ್ ಫಜಲ್ ಅವರು ಕಿಡಿಕಾರಿದ್ದಾರೆ.</p>.<p>‘ಪ್ರಜಾವಾಣಿ’ ಜತೆ ಮಾತನಾಡಿದ ಅವರು ‘ಕಾಂಗ್ರೆಸ್ ಸರ್ಕಾರದಲ್ಲಿ ಸಚಿವೆಯಾಗಿದ್ದ ಮತ್ತು ಹಿರಿಯ ನಾಗರಿಕಳಾದ ನನ್ನನ್ನು ಈ ರೀತಿ ನಡೆಸಿಕೊಂಡಿದ್ದು ಸರಿಯಲ್ಲ. ಪಕ್ಷದ ಎಲ್ಲಾ ಮಾಜಿ ಸಚಿವೆಯರಿಗೂ ಅವಕಾಶ ಕೊಟ್ಟು, ನನಗೆ ಮಾತ್ರ ವೇದಿಕೆಗೆ ಬಿಡಬಾರದು ಎಂದು ಪೊಲೀಸರಿಗೆ ಆದೇಶ ಕೊಟ್ಟವರು ಯಾರು’ ಎಂದು ಅವರು ಪ್ರಶ್ನಿಸಿದ್ದಾರೆ.</p>.<p>‘ಮಹಿಳಾ ಕಾರ್ಯಕ್ರಮವಾದ್ದರಿಂದ, ಉಮಾಶ್ರೀ ಅವರು ಎಲ್ಲರಿಗೂ ಒಂದೇ ರೀತಿಯ ಪಾಸ್ ಕೊಟ್ಟಿದ್ದೇವೆ, ಬರಬಹುದು ಎಂದು ಹೇಳಿದ್ದರಿಂದಲೇ ವೇದಿಕೆ ಹತ್ತಲು ಹೋಗಿದ್ದೆ. ಆದರೆ, ವೇದಿಕೆ ಹತ್ತಲು ವಿಶೇಷ ಪಾಸ್ ಮಾಡಿದ್ದರು ಎಂಬ ಮಾಹಿತಿ ಗೊತ್ತಿರಲಿಲ್ಲ. ಆ ವಿಷಯ ಗೊತ್ತಿದ್ದರೆ ನಾನು ವೇದಿಕೆ ಹತ್ತಲು ಹೋಗುತ್ತಿರಲಿಲ್ಲ. ನಾನು ಬಿಜೆಪಿ ಸೇರಿದ್ದೇನೆ ಎಂದು ಪಕ್ಷದಲ್ಲೇ ಕೆಲವರು ಅಪಪ್ರಚಾರ ಮಾಡಿದ್ದಾರೆ. ನಾನು ಈಗಲೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಹೊಂದಿದ್ದೇನೆ’ ಎಂದು ಹೇಳಿದರು.</p>.<p>ಡಿಕೆಶಿಗೆ ಗರಂ ಸಂದೇಶ:</p>.<p>ತಮ್ಮನ್ನು ಆಹ್ವಾನಿಸದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ವಾಟ್ಸ್ಆ್ಯಪ್ ಸಂದೇಶ ಕಳುಹಿಸಿರುವ, ‘ನೀವು ಇಂದು ಈ ಸ್ಥಾನ ಏರಲು ಎಸ್.ಎಂ.ಕೃಷ್ಣ ಅವರೇ ಕಾರಣರು. ಈ ಕಾರ್ಯಕ್ರಮಕ್ಕೆ ಎಲ್ಲ ಮಾಜಿ ಸಚಿವೆಯರನ್ನು ಆಹ್ವಾನಿಸಿ, ನನ್ನೊಬ್ಬಳನ್ನು ಬಿಟ್ಟಿದ್ದೇಕೆ? ನಾನು ಮುಸ್ಲಿಂ ಮಹಿಳೆ ಎಂಬ ಕಾರಣಕ್ಕಾ? ದಕ್ಷಿಣ ಭಾರತದಲ್ಲಿ ಮುಸ್ಲಿಂ ಸಮುದಾಯದಿಂದ ಸಚಿವೆ ಆಗಿದ್ದು ನಾನೊಬ್ಬಳು ಮಾತ್ರ’ ಎಂದು ಹೇಳಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ನಾ ನಾಯಕಿ ಕಾರ್ಯಕ್ರಮದಲ್ಲಿ ವೇದಿಕೆ ಹತ್ತಲು ಹೋದಾಗ ‘ನಿಮಗೆ ವೇದಿಕೆ ಹತ್ತಲು ಅನುಮತಿ ನೀಡಿಲ್ಲ ನಡೆಯಿರಿ’ ಎಂದು ಪೊಲೀಸರು ಕೈ ಹಿಡಿದು ಕೆಳಗೆ ಎಳೆದೊಯ್ದರು’ ಎಂದು ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ನಾಯಕಿ ನಫೀಸ್ ಫಜಲ್ ಅವರು ಕಿಡಿಕಾರಿದ್ದಾರೆ.</p>.<p>‘ಪ್ರಜಾವಾಣಿ’ ಜತೆ ಮಾತನಾಡಿದ ಅವರು ‘ಕಾಂಗ್ರೆಸ್ ಸರ್ಕಾರದಲ್ಲಿ ಸಚಿವೆಯಾಗಿದ್ದ ಮತ್ತು ಹಿರಿಯ ನಾಗರಿಕಳಾದ ನನ್ನನ್ನು ಈ ರೀತಿ ನಡೆಸಿಕೊಂಡಿದ್ದು ಸರಿಯಲ್ಲ. ಪಕ್ಷದ ಎಲ್ಲಾ ಮಾಜಿ ಸಚಿವೆಯರಿಗೂ ಅವಕಾಶ ಕೊಟ್ಟು, ನನಗೆ ಮಾತ್ರ ವೇದಿಕೆಗೆ ಬಿಡಬಾರದು ಎಂದು ಪೊಲೀಸರಿಗೆ ಆದೇಶ ಕೊಟ್ಟವರು ಯಾರು’ ಎಂದು ಅವರು ಪ್ರಶ್ನಿಸಿದ್ದಾರೆ.</p>.<p>‘ಮಹಿಳಾ ಕಾರ್ಯಕ್ರಮವಾದ್ದರಿಂದ, ಉಮಾಶ್ರೀ ಅವರು ಎಲ್ಲರಿಗೂ ಒಂದೇ ರೀತಿಯ ಪಾಸ್ ಕೊಟ್ಟಿದ್ದೇವೆ, ಬರಬಹುದು ಎಂದು ಹೇಳಿದ್ದರಿಂದಲೇ ವೇದಿಕೆ ಹತ್ತಲು ಹೋಗಿದ್ದೆ. ಆದರೆ, ವೇದಿಕೆ ಹತ್ತಲು ವಿಶೇಷ ಪಾಸ್ ಮಾಡಿದ್ದರು ಎಂಬ ಮಾಹಿತಿ ಗೊತ್ತಿರಲಿಲ್ಲ. ಆ ವಿಷಯ ಗೊತ್ತಿದ್ದರೆ ನಾನು ವೇದಿಕೆ ಹತ್ತಲು ಹೋಗುತ್ತಿರಲಿಲ್ಲ. ನಾನು ಬಿಜೆಪಿ ಸೇರಿದ್ದೇನೆ ಎಂದು ಪಕ್ಷದಲ್ಲೇ ಕೆಲವರು ಅಪಪ್ರಚಾರ ಮಾಡಿದ್ದಾರೆ. ನಾನು ಈಗಲೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಹೊಂದಿದ್ದೇನೆ’ ಎಂದು ಹೇಳಿದರು.</p>.<p>ಡಿಕೆಶಿಗೆ ಗರಂ ಸಂದೇಶ:</p>.<p>ತಮ್ಮನ್ನು ಆಹ್ವಾನಿಸದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ವಾಟ್ಸ್ಆ್ಯಪ್ ಸಂದೇಶ ಕಳುಹಿಸಿರುವ, ‘ನೀವು ಇಂದು ಈ ಸ್ಥಾನ ಏರಲು ಎಸ್.ಎಂ.ಕೃಷ್ಣ ಅವರೇ ಕಾರಣರು. ಈ ಕಾರ್ಯಕ್ರಮಕ್ಕೆ ಎಲ್ಲ ಮಾಜಿ ಸಚಿವೆಯರನ್ನು ಆಹ್ವಾನಿಸಿ, ನನ್ನೊಬ್ಬಳನ್ನು ಬಿಟ್ಟಿದ್ದೇಕೆ? ನಾನು ಮುಸ್ಲಿಂ ಮಹಿಳೆ ಎಂಬ ಕಾರಣಕ್ಕಾ? ದಕ್ಷಿಣ ಭಾರತದಲ್ಲಿ ಮುಸ್ಲಿಂ ಸಮುದಾಯದಿಂದ ಸಚಿವೆ ಆಗಿದ್ದು ನಾನೊಬ್ಬಳು ಮಾತ್ರ’ ಎಂದು ಹೇಳಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>