ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ಬಾರಿ ಶಾಲಾ, ಕಾಲೇಜುಗಳಿಗಿಲ್ಲ ಬೇಸಿಗೆ ರಜೆ: ಸುರೇಶ್ ಕುಮಾರ್

ಎರಡು ದಿನಗಳಲ್ಲಿ ಶಾಲಾ ಶುಲ್ಕ ಪ್ರಕಟ, ಅತಿಥಿ ಶಿಕ್ಷಕರ ಸೇವೆಗೂ ಸಮ್ಮತಿ
Last Updated 20 ಜನವರಿ 2021, 20:04 IST
ಅಕ್ಷರ ಗಾತ್ರ

ಶಿವಮೊಗ್ಗ: ಶಾಲಾ, ಕಾಲೇಜುಗಳು ತಡವಾಗಿ ಆರಂಭವಾಗಿರುವ ಕಾರಣ ಈ ಬಾರಿ ಬೇಸಿಗೆ ರಜೆಯನ್ನೂ ಬಳಸಿಕೊಂಡು ಮೇ ವರೆಗೆ ತರಗತಿಗಳನ್ನು ನಡೆಸುವ ಇಂಗಿತವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್ ವ್ಯಕ್ತಪಡಿಸಿದರು.

ನಗರದ ದುರ್ಗಿಗುಡಿ ಸರ್ಕಾರಿ ಶಾಲೆಯಲ್ಲಿ ಬುಧವಾರ ‘ಸ್ಮಾರ್ಟ್‌ಕ್ಲಾಸ್‌’ ವೀಕ್ಷಿಸಿದ ನಂತರ ಅವರು ಮಾತನಾಡಿದರು.

‘ಜೂನ್‌ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ.ಈಗಾಗಲೇ ಸಾಕಷ್ಟು ರಜೆಗಳನ್ನು ಕಳೆದಿದ್ದೀರಿ. ಉಳಿದ ನಾಲ್ಕೂವರೆ ತಿಂಗಳು ಶಿಕ್ಷಕರು ಪಾಠದ ಕಡೆ, ವಿದ್ಯಾರ್ಥಿಗಳು ಓದಿನತ್ತ ಗಮನ ಹರಿಸಬೇಕು. ಪಠ್ಯಕ್ರಮ ನಿಗದಿ ಕುರಿತು ಶೀಘ್ರ ನಿರ್ಧಾರ ಪ್ರಕಟಿಸಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಲ್ಲೂ ಒಂದೂವರೆ ತಿಂಗಳು ಸೇತುಬಂಧ ಶಿಕ್ಷಣಕ್ಕೆ ಮೀಸಲಿಡಲಾಗುವುದು. ಹಿಂದಿನ ವರ್ಷದ ಪಠ್ಯಗಳನ್ನು ವಿದ್ಯಾರ್ಥಿಗಳಿಗೆ ಪುನರ್‌ಮನನ ಮಾಡಿಸಿದ ನಂತರ ಹೊಸ ಪಠ್ಯ ಕಲಿಕೆಗೆ ಸಿದ್ಧಗೊಳಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT