ಈಶ್ವರಪ್ಪ, ‘ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಆಪ್ತ ಸಹಾಯಕರಾಗಿ ಹಾಕಿಸಿಕೊಡಿ ಎಂದು ಹಲವು ಶಾಸಕರು ನನ್ನ ಮೇಲೆ ನಿರಂತರ ಒತ್ತಡ ಹೇರುತ್ತಿರುತ್ತಾರೆ. ಅನಿವಾರ್ಯವಾಗಿ ನಿಯೋಜನೆ ಮೇರೆಗೆ ಕಳುಹಿಸಬೇಕಾಗುತ್ತದೆ. ಇಲ್ಲಿ ಗದ್ದಲ ಎಬ್ಬಿಸುವವರೇ ಮತ್ತೆ ಪತ್ರ ಹಿಡಿದುಕೊಂಡು ಬರುತ್ತಾರೆ. ಇಡೀ ಸದನ ಒಪ್ಪಿದರೆ ಈ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳಲು ನಾನು ಸಿದ್ಧ’ ಎಂದು ಹೇಳಿದರು. ಇಲಾಖೆಗೆ ವಾಪಸ್ ಕರೆಸಿಕೊಳ್ಳಿ ಎಂದು ಹಲವು ಸದಸ್ಯರು ಒತ್ತಾಯಿಸಿದರು.