<p><strong>ಬೆಳಗಾವಿ</strong>: ಅಚ್ಚುಕಟ್ಟು ಪ್ರದೇಶದಲ್ಲಿ ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಬೀಳುತ್ತಿರುವ ಮಳೆಯಿಂದಾಗಿ ಮಾರ್ಕಂಡೇಯ ನದಿ ಉಕ್ಕಿ ಹರಿಯುತ್ತಿದ್ದು, ಅಕ್ಕಪಕ್ಕದ ಸಾವಿರಾರು ಎಕರೆ ಭತ್ತ ಮೊದಲಾದ ಬೆಳೆಗಳು ಸಂಪೂರ್ಣ ಜಲಾವೃತವಾಗಿವೆ.</p>.<p>ತಾಲ್ಲೂಕಿನ ಉಚಗಾಂವ, ಹಿಂಡಲಗಾ, ಅಂಬೇವಾಡಿ, ಕಂಗ್ರಾಳಿ ಕೆ.ಎಚ್., ಅಲತಗಾ, ಕಡೋಲಿ, ಜಾಫರವಾಡಿ, ಕಾಕತಿ ಮೊದಲಾದ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶದಲ್ಲಿನ ಕೃಷಿ ಜಮೀನುಗಳು ಮುಳುಗಡೆಯಾಗಿವೆ. ಕೆರೆಯಂತೆ ಕಾಣಿಸುತ್ತಿವೆ.</p>.<p>ಮಳೆಗಾಲ ಆರಂಭ ಆದಾಗಿನಿಂದ 2ನೇ ಬಾರಿಗೆ ಬೆಳೆಗಳು ಮುಳುಗಿವೆ. ಆದರೆ, ಈ ಬಾರಿ ನೀರಿನ ಪ್ರಮಾಣ ಹೆಚ್ಚಾಗಿದೆ. ಹೀಗೆಯೇ ಹಲವು ದಿನಗಳವರೆಗೆ ನೀರು ನಿಂತರೆ ಬೆಳೆ ಸಂಪೂರ್ಣ ಹಾಳಾಗುವ ಆತಂಕ ರೈತರದಾಗಿದೆ.</p>.<p>ಹೋದ ವರ್ಷ ಅತಿವೃಷ್ಟಿ ಹಾಗೂ ಪ್ರವಾಹದಿಂದ ಈ ಭಾಗದ ರೈತರು ಬೆಳೆ ಕಳೆದುಕೊಂಡು ಅಪಾರ ನಷ್ಟ ಅನುಭವಿಸಿದ್ದರು.</p>.<p>ತಾಲ್ಲೂಕಿನ ಬರ್ಡೇ ಧಾಬಾ ಸಮೀಪದ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನೀರು ಸಂಗ್ರಹವಾಗಿ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಅಚ್ಚುಕಟ್ಟು ಪ್ರದೇಶದಲ್ಲಿ ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಬೀಳುತ್ತಿರುವ ಮಳೆಯಿಂದಾಗಿ ಮಾರ್ಕಂಡೇಯ ನದಿ ಉಕ್ಕಿ ಹರಿಯುತ್ತಿದ್ದು, ಅಕ್ಕಪಕ್ಕದ ಸಾವಿರಾರು ಎಕರೆ ಭತ್ತ ಮೊದಲಾದ ಬೆಳೆಗಳು ಸಂಪೂರ್ಣ ಜಲಾವೃತವಾಗಿವೆ.</p>.<p>ತಾಲ್ಲೂಕಿನ ಉಚಗಾಂವ, ಹಿಂಡಲಗಾ, ಅಂಬೇವಾಡಿ, ಕಂಗ್ರಾಳಿ ಕೆ.ಎಚ್., ಅಲತಗಾ, ಕಡೋಲಿ, ಜಾಫರವಾಡಿ, ಕಾಕತಿ ಮೊದಲಾದ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶದಲ್ಲಿನ ಕೃಷಿ ಜಮೀನುಗಳು ಮುಳುಗಡೆಯಾಗಿವೆ. ಕೆರೆಯಂತೆ ಕಾಣಿಸುತ್ತಿವೆ.</p>.<p>ಮಳೆಗಾಲ ಆರಂಭ ಆದಾಗಿನಿಂದ 2ನೇ ಬಾರಿಗೆ ಬೆಳೆಗಳು ಮುಳುಗಿವೆ. ಆದರೆ, ಈ ಬಾರಿ ನೀರಿನ ಪ್ರಮಾಣ ಹೆಚ್ಚಾಗಿದೆ. ಹೀಗೆಯೇ ಹಲವು ದಿನಗಳವರೆಗೆ ನೀರು ನಿಂತರೆ ಬೆಳೆ ಸಂಪೂರ್ಣ ಹಾಳಾಗುವ ಆತಂಕ ರೈತರದಾಗಿದೆ.</p>.<p>ಹೋದ ವರ್ಷ ಅತಿವೃಷ್ಟಿ ಹಾಗೂ ಪ್ರವಾಹದಿಂದ ಈ ಭಾಗದ ರೈತರು ಬೆಳೆ ಕಳೆದುಕೊಂಡು ಅಪಾರ ನಷ್ಟ ಅನುಭವಿಸಿದ್ದರು.</p>.<p>ತಾಲ್ಲೂಕಿನ ಬರ್ಡೇ ಧಾಬಾ ಸಮೀಪದ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನೀರು ಸಂಗ್ರಹವಾಗಿ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>