ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸದ ಅನಂತಕುಮಾರಗೆ ಜೀವ ಬೆದರಿಕೆ: ದೂರು ದಾಖಲು

Last Updated 6 ಏಪ್ರಿಲ್ 2021, 19:30 IST
ಅಕ್ಷರ ಗಾತ್ರ

ಶಿರಸಿ: ಸಂಸದ ಅನಂತಕುಮಾರ ಹೆಗಡೆ ಅವರಿಗೆ ಜೀವ ಬೆದರಿಕೆ ಬಂದಿದ್ದಾಗಿ ಅವರ ಆಪ್ತ ಕಾರ್ಯದರ್ಶಿ ಸುರೇಶ ಶೆಟ್ಟಿ ಇಲ್ಲಿನ ಹೊಸಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ದಾಖಲಿಸಿದ್ದಾರೆ.

ಸಂಸದರ ಮನೆ ಸ್ಥಿರ ದೂರವಾಣಿಗೆ ಸೋಮವಾರ ತಡರಾತ್ರಿ 2 ಗಂಟೆ ಸುಮಾರಿಗೆ ಕರೆಬಂದಿತ್ತು. ಅನಂತಕುಮಾರ್ ಕರೆ ಸ್ವೀಕರಿಸಿದ್ದು, ಆ ಬದಿಯ ವ್ಯಕ್ತಿ ಉರ್ದು ಮಿಶ್ರಿತ ಹಿಂದಿ ಭಾಷೆಯಲ್ಲಿ ಜೀವ ಬೆದರಿಕೆ ಒಡ್ಡಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಹನ್ನೊಂದು ಅಂಕಿಗಳಿರುವ ಆ ಸಂಖ್ಯೆಯನ್ನು ಪೊಲೀಸರಿಗೆ ತಿಳಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT