ಬೆಂಗಳೂರು: ‘ಹಂತಕರು ಮೇ 1ಕ್ಕೆ ನನಗೆ ಮುಹೂರ್ತ ಇಟ್ಟಿದ್ದಾರಂತೆ. ಅದೇ ದಿನ ನಟ ಶಿವರಾಜ್ಕುಮಾರ್, ಪಬ್ಲಿಕ್ ಟಿವಿ ಸಂಪಾದಕ ಎಚ್.ಆರ್.ರಂಗನಾಥ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಹತ್ಯೆ ಮಾಡುತ್ತಾರಂತೆ. ಈ ಬಗ್ಗೆ ಕರೀಂ ಚಳ್ಳಕೆರೆ ಎಂಬ ವ್ಯಕ್ತಿ ನನಗೆ ಪತ್ರ ಬರೆದಿದ್ದಾರೆ. ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದಿದ್ದೇನೆ. ಅವರು ಭದ್ರತೆ ಒದಗಿಸಿದ್ದಾರೆ’ ಎಂದು ಲೇಖಕಿ ಬಿ.ಟಿ.ಲಲಿತಾ ನಾಯ್ಕ್ ಹೇಳಿದರು.