ಕಾಂಗ್ರೆಸ್ ಸದಸ್ಯ ಪಿ.ಆರ್. ರಮೇಶ್ ವಿಧಾನ ಪರಿಷತ್ನಲ್ಲಿ ಶೂನ್ಯವೇಳೆಯಲ್ಲಿ ಮಾಡಿದ್ದ ಪ್ರಸ್ತಾಪಕ್ಕೆ ಮಂಗಳವಾರ ಉತ್ತರ ನೀಡಿದ ಗೃಹ ಸಚಿವರು, ‘ಭೈರಪ್ಪ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಒತ್ತಾಯಿಸಿ ದೇವನಹಳ್ಳಿ ಹಾಗೂ ಬೆಂಗಳೂರು ನಗರದ ಸಿದ್ಧಾಪುರ ಪೊಲೀಸ್ ಠಾಣೆಗಳಿಗೆ ದೂರುಗಳು ಬಂದಿವೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೂ ಒಂದು ದೂರು ಬಂದಿದೆ’ ಎಂದು ಮಾಹಿತಿ ನೀಡಿದ್ದಾರೆ.