ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ವಿವಿಧ ಸಮುದಾಯಗಳು ಮೀಸಲಾತಿಯಲ್ಲಿ ಹೆಚ್ಚಿನ ಪಾಲು ಪಡೆಯಲು, ಪ್ರವರ್ಗಗಳಲ್ಲಿ ಬದಲಾವಣೆ ಮತ್ತು ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಇಟ್ಟಿರುವ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಿದ್ದು ಸ್ವಾಗತಾರ್ಹ. ಸರ್ಕಾರ ಈ ಕೆಲಸವನ್ನು ನಾಲ್ಕು ತಿಂಗಳ ಹಿಂದೆಯೇ ಮಾಡಬೇಕಿತ್ತು. ತಡವಾಗಿಯಾದರೂ ಸಮಿತಿ ರಚಿಸಿದ್ದು ಸಂತಸದ ತಂದಿದೆ’ ಎಂದು ತೋಂಟದ ಶ್ರೀಗಳು ತಿಳಿಸಿದರು.