ಆರ್.ಡಿ. ಪಾಟೀಲ ಸೋದರಳಿಯ ಆಳಂದ ತಾಲ್ಲೂಕಿನ ಜಾವಳಿ (ಡಿ) ಗ್ರಾಮದ ಪ್ರಕಾಶ ಬಸವರಾಜ ಉಡಗಿ, ಅಫಜಲಪುರ ತಾಲ್ಲೂಕು ಮಣೂರ ಗ್ರಾಮದ ಅಸ್ಲಂ ಸೈಫುನ್ ಮುಲ್ಕ್ ಮುಜಾವರ ಹಾಗೂ ಮುನಾಫ್ ಜಮಾದಾರ ಬಂಧಿತರು. ಇವರು ಪಿಎಸ್ಐ ಸ್ಪರ್ಧಾತ್ಮಕ ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆಗಳನ್ನು ಸೋರಿಕೆ ಮಾಡಿ, ಅಭ್ಯರ್ಥಿಗಳಿಗೆ ಉತ್ತರ ತಲುಪಿಸುವ ಕಾರ್ಯವನ್ನು ಮಾಡುತ್ತಿದ್ದರು ಎಂದು ಗೊತ್ತಾಗಿದೆ.