ಚಿತ್ರದ ನಿರ್ದೇಶಕ ಶಂಕರ್ ರಾಜು, ಸಾಹಸ ನಿರ್ದೇಶಕ ವಿನೋದ್ಕುಮಾರ್ ಹಾಗೂ ಕ್ರೇನ್ ಚಾಲಕ ಮಹದೇವ್ ಎಂಬುವರನ್ನು ಮಂಗಳವಾರ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಆರೋಪಿಗಳನ್ನು ಆ. 24ರವರೆಗೆ ನ್ಯಾಯಾಂಗದ ವಶಕ್ಕೆ ಕೋರ್ಟ್ ನೀಡಿದೆ ಎಂದು ರಾಮನಗರ ಎಸ್ಪಿ ಗಿರೀಶ್ ತಿಳಿಸಿದರು. ಚಿತ್ರದ ನಿರ್ಮಾಪಕ ಗುರು ದೇಶಪಾಂಡೆ ಹಾಗೂ ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.