ಕರಂದ್ಲಾಜೆ ವಿರುದ್ಧ ಟೀಕೆ: ‘ರಾಜಕೀಯ ಬದುಕಿನಲ್ಲಿ ಅಭಿವೃದ್ಧಿ ಎಂಬ ಶಬ್ದವನ್ನೇ ಆಡದ–ಕೇಳದ ಸಂಸದೆ ಶೋಭಾ ಕರಂದ್ಲಾಜೆ ಅವರು, ರೈತರನ್ನು ದೇಶದ್ರೋಹಿಗಳಿಗೆ ಹೋಲಿಸಿರುವುದು ಕೇಡುಗಾಲದ ಪರಮಾವಧಿ. ರೈತರ ಭವಿಷ್ಯವನ್ನು ಕತ್ತಲೆಗೆ ನೂಕಿ, ಮತ್ತೆ ಅವರನ್ನೇ ದೇಶದ್ರೋಹಿ ಎನ್ನುತ್ತಿರುವ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ’ ಎಂದು ಆಗ್ರಹಿಸಿದ್ದಾರೆ.