<p><strong>ಬೆಂಗಳೂರು</strong>: ರಾಜ್ಯ ಸರ್ಕಾರಿ ನೌಕರರ ವಿರುದ್ಧದಅಕ್ರಮಗಳು ಮತ್ತು ದುರ್ನಡತೆ ಆರೋಪಕ್ಕೆ ಸಂಬಂಧಿಸಿದಂತೆ ಶಿಸ್ತು ಕ್ರಮ ಜರುಗಿಸುವಲ್ಲಿ ಆಗುವ ವಿಳಂಬವನ್ನು ತಡೆಗಟ್ಟಲು ಗರಿಷ್ಠ ಕಾಲಮಿತಿ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ.</p>.<p>ನೌಕರನ ದುರ್ನಡತೆ ಬಗ್ಗೆ ವಿಚಾರಣೆ ನಡೆಸಿ ಶಿಸ್ತಿನ ಕ್ರಮ ಜರುಗಿಸಲು ಒಟ್ಟು 9 ತಿಂಗಳ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ. ಸರ್ಕಾರದ ಕಾರ್ಯದರ್ಶಿಗಳು ಮತ್ತು ಇಲಾಖಾ ಮುಖ್ಯಸ್ಥರು ಈ ಸೂಚನೆಗಳನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.</p>.<p>ಅಕ್ರಮಗಳು ಮತ್ತು ದುರ್ನಡತೆಗಳು ಶಿಸ್ತು ಪ್ರಾಧಿಕಾರದ ಗಮನಕ್ಕೆ ಬಂದ ದಿನಾಂಕದಿಂದ ದೋಷಾರೋಪಣ ಪಟ್ಟಿ ತಯಾರಿಸಲು ದಾಖಲೆಗಳನ್ನು ಪಡೆಯಲು/ ಆರಂಭಿಕ ತನಿಖೆ, ವಿಚಾರಣೆ ಅಂತಿಮಗೊಳಿಸಲು/ ದೋಷಾರೋಪಣ ಪಟ್ಟಿ ತಯಾರಿಸಿ ಜಾರಿಗೊಳಿಸಲು 1 ತಿಂಗಳು ನಿಗದಿ ಮಾಡಲಾಗಿದೆ.</p>.<p>ದೋಷಾರೋಪಣ ಪಟ್ಟಿಗೆ ಸರ್ಕಾರಿ ನೌಕರನಿಂದ ವಿವರಣೆ ಪಡೆಯಲು, ವಿಚಾರಣಾ ಅಧಿಕಾರಿಯನ್ನು ನೇಮಿಸಲು1 ತಿಂಗಳು, ವಿಚಾರಣೆ ನಡೆಸಿ ಮತ್ತು ವರದಿ ಮಂಡಿಸಲು 4 ತಿಂಗಳು, ವಿಚಾರಣಾ ವರದಿಯನ್ನು ನಡೆಸಲು ಮತ್ತು ಅದನ್ನು ಸ್ವೀಕರಿಸುವ ಬಗ್ಗೆ ನಿರ್ಣಯಿಸಲು 1 ತಿಂಗಳು, ಕಾರಣ ಕೇಳುವ 2 ನೇ ಸೂಚನಾ ಪತ್ರವನ್ನು ವಿಚಾರಣಾ ವರದಿಯ ಜೊತೆಗೆ ಆಪಾದಿತ ನೌಕರನಿಗೆ ನೀಡಲು 1 ತಿಂಗಳು ಮತ್ತು ಅಂತಿಮ ಆದೇಶ ಹೊರಡಿಸಲು ಗರಿಷ್ಠ ಕಾಲಮಿತಿ 1 ತಿಂಗಳು ನಿಗದಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯ ಸರ್ಕಾರಿ ನೌಕರರ ವಿರುದ್ಧದಅಕ್ರಮಗಳು ಮತ್ತು ದುರ್ನಡತೆ ಆರೋಪಕ್ಕೆ ಸಂಬಂಧಿಸಿದಂತೆ ಶಿಸ್ತು ಕ್ರಮ ಜರುಗಿಸುವಲ್ಲಿ ಆಗುವ ವಿಳಂಬವನ್ನು ತಡೆಗಟ್ಟಲು ಗರಿಷ್ಠ ಕಾಲಮಿತಿ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ.</p>.<p>ನೌಕರನ ದುರ್ನಡತೆ ಬಗ್ಗೆ ವಿಚಾರಣೆ ನಡೆಸಿ ಶಿಸ್ತಿನ ಕ್ರಮ ಜರುಗಿಸಲು ಒಟ್ಟು 9 ತಿಂಗಳ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ. ಸರ್ಕಾರದ ಕಾರ್ಯದರ್ಶಿಗಳು ಮತ್ತು ಇಲಾಖಾ ಮುಖ್ಯಸ್ಥರು ಈ ಸೂಚನೆಗಳನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.</p>.<p>ಅಕ್ರಮಗಳು ಮತ್ತು ದುರ್ನಡತೆಗಳು ಶಿಸ್ತು ಪ್ರಾಧಿಕಾರದ ಗಮನಕ್ಕೆ ಬಂದ ದಿನಾಂಕದಿಂದ ದೋಷಾರೋಪಣ ಪಟ್ಟಿ ತಯಾರಿಸಲು ದಾಖಲೆಗಳನ್ನು ಪಡೆಯಲು/ ಆರಂಭಿಕ ತನಿಖೆ, ವಿಚಾರಣೆ ಅಂತಿಮಗೊಳಿಸಲು/ ದೋಷಾರೋಪಣ ಪಟ್ಟಿ ತಯಾರಿಸಿ ಜಾರಿಗೊಳಿಸಲು 1 ತಿಂಗಳು ನಿಗದಿ ಮಾಡಲಾಗಿದೆ.</p>.<p>ದೋಷಾರೋಪಣ ಪಟ್ಟಿಗೆ ಸರ್ಕಾರಿ ನೌಕರನಿಂದ ವಿವರಣೆ ಪಡೆಯಲು, ವಿಚಾರಣಾ ಅಧಿಕಾರಿಯನ್ನು ನೇಮಿಸಲು1 ತಿಂಗಳು, ವಿಚಾರಣೆ ನಡೆಸಿ ಮತ್ತು ವರದಿ ಮಂಡಿಸಲು 4 ತಿಂಗಳು, ವಿಚಾರಣಾ ವರದಿಯನ್ನು ನಡೆಸಲು ಮತ್ತು ಅದನ್ನು ಸ್ವೀಕರಿಸುವ ಬಗ್ಗೆ ನಿರ್ಣಯಿಸಲು 1 ತಿಂಗಳು, ಕಾರಣ ಕೇಳುವ 2 ನೇ ಸೂಚನಾ ಪತ್ರವನ್ನು ವಿಚಾರಣಾ ವರದಿಯ ಜೊತೆಗೆ ಆಪಾದಿತ ನೌಕರನಿಗೆ ನೀಡಲು 1 ತಿಂಗಳು ಮತ್ತು ಅಂತಿಮ ಆದೇಶ ಹೊರಡಿಸಲು ಗರಿಷ್ಠ ಕಾಲಮಿತಿ 1 ತಿಂಗಳು ನಿಗದಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>