ಬೆಂಗಳೂರು: ‘ಸಿದ್ದರಾಮಯ್ಯನವರೇ, ಹೈದರಾಲಿ ಮತ್ತು ಟಿಪ್ಪು ಅಪ್ರತಿಮ ದೇಶಪ್ರೇಮಿಗಳು ಎನ್ನುವ ನೀವು ವೀರ ವನಿತೆ ಒನಕೆ ಓಬವ್ವ ಹಾಗೂ ಚಿತ್ರದುರ್ಗದ ಮದಕರಿ ನಾಯಕರಿಗೆ ಯಾವ ಪಟ್ಟಕಟ್ಟುತ್ತೀರಿ?’ ಎಂದು ಬಿಜೆಪಿ ಪ್ರಶ್ನಿಸಿದೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ, ‘ಟಿಪ್ಪುವನ್ನು ವೈಭವೀಕರಿಸುವ ನಿಮಗೆ ಓಬವ್ವ ಹಾಗೂ ಮದಕರಿ ನಾಯಕನ ಶೌರ್ಯ ಕಾಣಿಸುವುದಿಲ್ಲವೇ?, ನೀವು ವೈಭವೀಕರಿಸುವ ಹೈದರಾಲಿ ಮತ್ತು ಟಿಪ್ಪುವಿನ ಹೇಡಿತನ ಹಾಗೂ ಮೋಸವನ್ನು ಒನಕೆ ಓಬವ್ವ ಆ ಕಾಲದಲ್ಲೇ ಬಯಲು ಮಾಡಿದ್ದಳು. ಚಿತ್ರದುರ್ಗದ ಕೋಟೆ ರಕ್ಷಣೆಗಾಗಿ ಏಕಾಂಗಿಯಾಗಿ ಒನಕೆ ಹಿಡಿದು ಹೋರಾಡಿದ ಈ ಹೆಣ್ಣುಮಗಳ ಶೌರ್ಯಕ್ಕೂ, ಹೈದರಾಲಿ, ಟಿಪ್ಪುವಿನ ಕ್ರೌರ್ಯಕ್ಕೂ ಹೋಲಿಕೆ ಸಾಧ್ಯವೇ? ಎಂದು ಪ್ರಶ್ನಿಸಿದೆ.
ಮೈಸೂರು ರಾಜರು, ಮಯೂರ, ಗಂಗರಸರು, ರಾಷ್ಟ್ರಕೂಟರು, ಹೊಯ್ಸಳರು ಮಠ-ಮಂದಿರ ಕಟ್ಟಿ ನಾಡನ್ನು ಸುಭೀಕ್ಷವಾಗಿಟ್ಟಿದ್ದನ್ನು ಏಕೆ ಮರೆ ಮಾಚುವಿರಿ ಸಿದ್ದರಾಮಯ್ಯ?, ಟಿಪ್ಪು ಜಯಂತಿಯನ್ನು ಜನ ತಿರಸ್ಕರಿಸಿದರೂ, ಮುಸ್ಲಿಂ ಸಮುದಾಯವೇ ಟಿಪ್ಪು ಜಯಂತಿಯ ಅಗತ್ಯವಿಲ್ಲವೆಂದರೂ ಟಿಪ್ಪುವನ್ನು ಆರಾಧಿಸುತ್ತಿರುವ ಮರ್ಮವೇನು? ಎಂದು ಬಿಜೆಪಿ ಕಿಡಿಕಾರಿದೆ.
'ಸಿದ್ದರಾಮಯ್ಯನವರೇ, ಇತಿಹಾಸದ ಪುಸ್ತಕ ಓದಿ, ಇತಿಹಾಸ ತಿರುಚಿದವರ ಬರಹವನ್ನಲ್ಲ. ನಿಮಗೆ ಓಲೈಕೆ ರಾಜಕಾರಣ ಮಾತ್ರ ಮುಖ್ಯ. ಹೀಗಾಗಿ ಒನಕೆ ಓಬವ್ವ ಹಾಗೂ ಮದಕರಿ ನಾಯಕರ ಜಯಂತಿಯ ಬದಲು ಟಿಪ್ಪು ಜಯಂತಿ ಆಚರಿಸಿದಿರಿ. ನೀವೊಬ್ಬ ಹಿಂದು ವಿರೋಧಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ' ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಹೈದರಾಲಿ ಮತ್ತು ಟಿಪ್ಪು ಅಪ್ರತಿಮ ದೇಶಪ್ರೇಮಿಗಳು ಎನ್ನುವ ಸಿದ್ದರಾಮಯ್ಯನವರೇ,
— BJP Karnataka (@BJP4Karnataka) November 11, 2021
ವೀರವನಿತೆ ಓಬವ್ವ ಹಾಗೂ ಚಿತ್ರದುರ್ಗದ ಮದಕರಿ ನಾಯಕರಿಗೆ ಯಾವ ಪಟ್ಟಕಟ್ಟುತ್ತೀರಿ?
ಟಿಪ್ಪುವನ್ನು ವೈಭವೀಕರಿಸುವ ನಿಮಗೆ ಓಬವ್ವ ಹಾಗೂ ಮದಕರಿ ನಾಯಕನ ಶೌರ್ಯ ಕಾಣಿಸುವುದಿಲ್ಲವೇ?#ಬುರುಡೆರಾಮಯ್ಯ pic.twitter.com/OW9XsMgRZw
ಸಿದ್ದರಾಮಯ್ಯನವರೇ,
— BJP Karnataka (@BJP4Karnataka) November 11, 2021
ನೀವು ವೈಭವೀಕರಿಸುವ ಹೈದರಾಲಿ ಹಾಗೂ ಟಿಪ್ಪುವಿನ ಹೇಡಿತನ ಹಾಗೂ ಮೋಸವನ್ನು #ಒನಕೆಓಬವ್ವ ಆ ಕಾಲದಲ್ಲೇ ಬಯಲು ಮಾಡಿದ್ದಳು.
ಚಿತ್ರದುರ್ಗದ ಕೋಟೆ ರಕ್ಷಣೆಗಾಗಿ ಏಕಾಂಗಿಯಾಗಿ ಒನಕೆ ಹಿಡಿದು ಹೋರಾಡಿದ ಈ ಹೆಣ್ಣುಮಗಳ ಶೌರ್ಯಕ್ಕೂ, ಹೈದರಾಲಿ, ಟಿಪ್ಪುವಿನ ಕ್ರೌರ್ಯಕ್ಕೂ ಹೋಲಿಕೆ ಸಾಧ್ಯವೇ?#ಬುರುಡೆರಾಮಯ್ಯ
ವೀರವನಿತೆ #ಒನಕೆಓಬವ್ವ ಜಯಂತಿ ಪ್ರಯುಕ್ತ ಶುಭಾಶಯ ಹೇಳುವುದಕ್ಕೆ ಸಿದ್ದರಾಮಯ್ಯ ಅವರಿಗೆ ಧೈರ್ಯವಿದೆಯೇ?
— BJP Karnataka (@BJP4Karnataka) November 11, 2021
ಸಿದ್ದರಾಮಯ್ಯನವರೇ, ಟಿಪ್ಪು ಜಯಂತಿಯ ಮೋಜಿನಲ್ಲಿ ಚಾಮರಾಜಪೇಟೆಯಲ್ಲಿ ಕಳೆದು ಹೋಗಬೇಡಿ.#ಹಿಂದೂವಿರೋಧಿಸಿದ್ದರಾಮಯ್ಯ pic.twitter.com/prGvk8a5to
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.