ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈದ್ಗಾ ಗಣೇಶೋತ್ಸವ ಕುರಿತು ಇಂದೇ ತೀರ್ಮಾನ: ಆರ್‌. ಅಶೋಕ

Last Updated 30 ಆಗಸ್ಟ್ 2022, 10:55 IST
ಅಕ್ಷರ ಗಾತ್ರ

ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಮಂಗಳವಾರವೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈದ್ಗಾ ಮೈದಾನದಲ್ಲಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಗಿದೆ. ಯಾವ ಸಮುದಾಯವೂ ಅದನ್ನು ವಿರೋಧಿಸಿಲ್ಲ. ಸ್ವಾತಂತ್ರ್ಯ ದಿನಾಚರಣೆಯ ಮಾದರಿಯಲ್ಲೇ ಈ ವಿಚಾರದಲ್ಲೂ ಸ್ಪಷ್ಟವಾದ ನಿರ್ಧಾರ ಕೈಗೊಳ್ಳುತ್ತೇವೆ’ ಎಂದರು.

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ಕೋರಿ ಐದು ಅರ್ಜಿಗಳು ಸಲ್ಲಿಕೆಯಾಗಿದ್ದವು. ಮೂರು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಎರಡು ಅರ್ಜಿಗಳು ಬಾಕಿ ಇವೆ. ಮಂಗಳವಾರ ರಾತ್ರಿಯೊಳಗೆ ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು..

‘ಸ್ಥಳೀಯ ನಾಯಕರ ಜತೆಗೂ ಚರ್ಚಿಸಿದ್ದೇವೆ. ಪರ– ವಿರೋಧ ಎರಡೂ ರೀತಿಯ ಅಭಿಪ್ರಾಯಗಳು ಬಂದಿವೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಬೇಕೋ? ಬೇಡವೋ ಎಂಬುದನ್ನು ನಿರ್ಧರಿಸುತ್ತವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT