ಹಿರಿಯೂರು ತಾಲ್ಲೂಕಿನ ಕರಿಯಾಲ ಗ್ರಾಮದಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ 600ಕ್ಕೂ ಹೆಚ್ಚು ಫಸಲಿಗೆ ಬಂದಿದ್ದ ಬಾಳೆ ಗಿಡಗಳು, ಐದು ತೆಂಗಿನ ಮರಗಳು ಧರೆಗೆ ಉರುಳಿವೆ. ಓಣಿ ಹಟ್ಟಿಯಲ್ಲಿ 5 ಗುಡಿಸಲುಗಳು ಕುಸಿದುಬಿದ್ದಿವೆ. ತಾಲೂಕಿನಲ್ಲಿ 25ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಒಂದು ಪರಿವರ್ತಕ ಹಾನಿಗೆ
ಒಳಗಾಗಿದೆ.