<p><strong>ಬೆಂಗಳೂರು:</strong> ಜಮ್ಮು–ಕಾಶ್ಮೀರದಲ್ಲಿ ಭಾರತದ ಯಾವುದೇ ನಾಗರಿಕ ಜಮೀನು ಖರೀದಿಸಬಹುದೆಂಬ ಕಾನೂನು ಜಾರಿ ಆಗಿರುವುದರಿಂದ ಅಲ್ಲಿ ಕರ್ನಾಟಕದ ಪ್ರವಾಸೋದ್ಯಮ ಕೇಂದ್ರವನ್ನು ಸ್ಥಾಪಿಸಲು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಉತ್ಸಾಹದಲ್ಲಿದ್ದರೂ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಆ ಪ್ರಕ್ರಿಯೆಗೆ ಹಿನ್ನಡೆಯಾಗಿದೆ.</p>.<p>ಜಮ್ಮ–ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡುತ್ತಿದ್ದಂತೆ, ಆ ರಾಜ್ಯದಲ್ಲಿ ಕರ್ನಾಟಕದ ಪ್ರವಾಸೋದ್ಯಮ ಕೇಂದ್ರವನ್ನು ಸ್ಥಾಪಿಸಲು ಪ್ರವಾಸೋದ್ಯಮ ಇಲಾಖೆ ಸಿದ್ಧತೆ ನಡೆಸಿತ್ತು.</p>.<p>ಪ್ರವಾಸೋದ್ಯಮ ಇಲಾಖೆ ಕಳೆದ ವರ್ಷ ಅಲ್ಲಿನ ಲೆಫ್ಟಿನೆಂಟ್ ಜನರಲ್ ಅವರಿಗೆ ಈ ಸಂಬಂಧ ಪ್ರಸ್ತಾವನೆಯೊಂದನ್ನು ಕಳುಹಿಸಿತ್ತು. ಪ್ರವಾಸೋದ್ಯಮ ಉತ್ತೇಜನ ಕೇಂದ್ರ ಮತ್ತು ಮ್ಯೂಸಿಯಂ ಸ್ಥಾಪಿಸುವ ಸಲುವಾಗಿ ಆ ರಾಜ್ಯಕ್ಕೆ ಭೇಟಿ ನೀಡಲು ತೀರ್ಮಾನಿಸಲಾಗಿತ್ತು. ಕೋವಿಡ್ ಮತ್ತು ಲಾಕ್ಡೌನ್ನಿಂದ ಅದು ಸಾಧ್ಯವಾಗಲಿಲ್ಲ ಎಂದು ಸಚಿವ ರವಿ ಹೇಳಿದರು.</p>.<p>‘ಪ್ರವಾಸೋದ್ಯಮ ಕೇಂದ್ರ ಮತ್ತು ಮ್ಯೂಸಿಯಂ ಸ್ಥಾಪನೆಗೆ ಅಲ್ಲಿನ ವಿಮಾನ ನಿಲ್ದಾಣದ ಬಳಿ ಮೂರು ಎಕರೆ ಭೂಮಿ ಬೇಕಾಗುತ್ತದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವುದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮುಂದೆ ಈ ಖಾತೆ ವಹಿಸಿಕೊಳ್ಳುವವರು ಮುಂದುವರಿಸಬೇಕು. ಅದಕ್ಕೆ ಅಗತ್ಯವಿರುವ ಎಲ್ಲ ಸಹಕಾರ ನೀಡುತ್ತೇನೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಮ್ಮು–ಕಾಶ್ಮೀರದಲ್ಲಿ ಭಾರತದ ಯಾವುದೇ ನಾಗರಿಕ ಜಮೀನು ಖರೀದಿಸಬಹುದೆಂಬ ಕಾನೂನು ಜಾರಿ ಆಗಿರುವುದರಿಂದ ಅಲ್ಲಿ ಕರ್ನಾಟಕದ ಪ್ರವಾಸೋದ್ಯಮ ಕೇಂದ್ರವನ್ನು ಸ್ಥಾಪಿಸಲು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಉತ್ಸಾಹದಲ್ಲಿದ್ದರೂ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಆ ಪ್ರಕ್ರಿಯೆಗೆ ಹಿನ್ನಡೆಯಾಗಿದೆ.</p>.<p>ಜಮ್ಮ–ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡುತ್ತಿದ್ದಂತೆ, ಆ ರಾಜ್ಯದಲ್ಲಿ ಕರ್ನಾಟಕದ ಪ್ರವಾಸೋದ್ಯಮ ಕೇಂದ್ರವನ್ನು ಸ್ಥಾಪಿಸಲು ಪ್ರವಾಸೋದ್ಯಮ ಇಲಾಖೆ ಸಿದ್ಧತೆ ನಡೆಸಿತ್ತು.</p>.<p>ಪ್ರವಾಸೋದ್ಯಮ ಇಲಾಖೆ ಕಳೆದ ವರ್ಷ ಅಲ್ಲಿನ ಲೆಫ್ಟಿನೆಂಟ್ ಜನರಲ್ ಅವರಿಗೆ ಈ ಸಂಬಂಧ ಪ್ರಸ್ತಾವನೆಯೊಂದನ್ನು ಕಳುಹಿಸಿತ್ತು. ಪ್ರವಾಸೋದ್ಯಮ ಉತ್ತೇಜನ ಕೇಂದ್ರ ಮತ್ತು ಮ್ಯೂಸಿಯಂ ಸ್ಥಾಪಿಸುವ ಸಲುವಾಗಿ ಆ ರಾಜ್ಯಕ್ಕೆ ಭೇಟಿ ನೀಡಲು ತೀರ್ಮಾನಿಸಲಾಗಿತ್ತು. ಕೋವಿಡ್ ಮತ್ತು ಲಾಕ್ಡೌನ್ನಿಂದ ಅದು ಸಾಧ್ಯವಾಗಲಿಲ್ಲ ಎಂದು ಸಚಿವ ರವಿ ಹೇಳಿದರು.</p>.<p>‘ಪ್ರವಾಸೋದ್ಯಮ ಕೇಂದ್ರ ಮತ್ತು ಮ್ಯೂಸಿಯಂ ಸ್ಥಾಪನೆಗೆ ಅಲ್ಲಿನ ವಿಮಾನ ನಿಲ್ದಾಣದ ಬಳಿ ಮೂರು ಎಕರೆ ಭೂಮಿ ಬೇಕಾಗುತ್ತದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವುದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮುಂದೆ ಈ ಖಾತೆ ವಹಿಸಿಕೊಳ್ಳುವವರು ಮುಂದುವರಿಸಬೇಕು. ಅದಕ್ಕೆ ಅಗತ್ಯವಿರುವ ಎಲ್ಲ ಸಹಕಾರ ನೀಡುತ್ತೇನೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>